ಕಾವಲ್ ಭೈರಸಂದ್ರ ಗಲಾಟೆಯಲ್ಲಿ 60 ಪೊಲೀಸರಿಗೆ ಗಾಯ: ಕಮಿಷನರ್ ಕಮಲ್ ಪಂತ್

Update: 2020-08-12 16:56 GMT

ಬೆಂಗಳೂರು, ಆ.12: ಕಾವಲ್ ಭೈರಸಂದ್ರ ಗಲಾಟೆ ಪ್ರಕರಣದಲ್ಲಿ ಮೂವರು ಸಾವನ್ನಪ್ಪಿದ್ದು, 60 ಪೊಲೀಸರಿಗೆ ಗಾಯಗಳಾಗಿವೆ ಎಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಹೇಳಿದ್ದಾರೆ.

ಬುಧವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗಲಭೆ ಪ್ರಕರಣದಲ್ಲಿ ಮೂವರು ಸಾವನ್ನಪ್ಪಿದ್ದು, 60 ಪೊಲೀಸರಿಗೆ ಗಾಯಗಳಾಗಿವೆ. ಇಲ್ಲಿನ ಡಿಜೆ ಹಳ್ಳಿ ಪೊಲೀಸ್ ಠಾಣೆ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿ, ಠಾಣೆ ಆವರಣದಲ್ಲಿದ್ದ ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ ಎಂದು ತಿಳಿಸಿದರು.

ಪ್ರಸ್ತುತ ಪರಿಸ್ಥಿತಿ ಸಂಪೂರ್ಣ ಹತೋಟಿಯಲ್ಲಿದ್ದು, ಕೆಲವರಿಗೆ ಗುಂಡೇಟಿನಿಂದ ಗಾಯಗಳಾಗಿವೆ. ಪರಿಸ್ಥಿತಿ ವಿಕೋಪಕ್ಕೆ ಹೋಗಿದ್ದರಿಂದ ಗುಂಡಿನ ದಾಳಿ ನಡೆಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.

* ಒಟ್ಟು 145 ಮಂದಿ ಬಂಧನ

* 200 ಜನರ ವಿರುದ್ಧ ಒಟ್ಟು 15 ಎಫ್‍ಐಆರ್

* ಗಾಯಗೊಂಡ ಪೊಲೀಸರ ಸಂಖ್ಯೆ 78

* ಜಖಂಗೊಂಡ ವಾಹನಗಳ ಸಂಖ್ಯೆ 20ಕ್ಕೂ ಅಧಿಕ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News