‘ಸುಶಾಂತ್ ಸಿಂಗ್ ಪ್ರಕರಣ ರಾಜಕೀಯ ತಿರುವು ಪಡೆದುಕೊಂಡಿದೆ’: ಬಿಹಾರದ ಪೊಲೀಸ್ ಅಧಿಕಾರಿ

Update: 2020-08-12 16:59 GMT

ಮುಂಬೈ/ಪಾಟ್ನಾ, ಆ.12: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಕುರಿತು ತನಿಖೆ ತೀವ್ರಗೊಳ್ಳುತ್ತಿದ್ದಂತೆ ಬಿಹಾರದ ಉನ್ನತ ಪೊಲೀಸ್ ಅಧಿಕಾರಿ ಗುಪ್ತೇಶ್ವರ ಪಾಂಡೆ, ‘‘ಈ ಪ್ರಕರಣ ಈಗ ರಾಜಕೀಯಕ್ಕೆ ತಿರುಗಿದೆ’’ ಎಂದು ಬುಧವಾರ ಹೇಳಿದ್ದಾರೆ.

‘‘ಈ ಘಟನೆ ನಡೆದಾಗ, ಇದು ರೀತಿಯ ಅಸಹ್ಯ ತಿರುವು ಪಡೆದುಕೊಳ್ಳುತ್ತದೆ ಎಂದು ನಾವು ಭಾವಿಸಿರಲಿಲ್ಲ. ಈ ಪ್ರಕರಣ ಈಗ ರಾಜಕೀಯ ತಿರುವು ಪಡೆದುಕೊಂಡಿದೆ’’ ಎಂದು ಗುಪ್ತೇಶ್ವರ ಪಾಂಡೆ ತಿಳಿಸಿದ್ದಾರೆ.

ನಟ ಸುಶಾಂತ್ ರಜಪೂತ್ ಸಿಂಗ್ ಅವರ ಮೃತದೇಹ ಮುಂಬೈಯ ಬಾಂದ್ರಾದಲ್ಲಿರುವ ಅವರ ನಿವಾಸದಲ್ಲಿ ಜೂನ್ 14ರಂದು ಪತ್ತೆಯಾಗಿತ್ತು. ಇದು ಆತ್ಮಹತ್ಯೆ ಎಂದು ಮುಂಬೈ ಪೊಲೀಸರು ಹೇಳಿದ್ದರು. ಕಳೆದ ತಿಂಗಳು ಸುಶಾಂತ್ ಸಿಂಗ್ ರಜಪೂತ್ ಅವರ ಕುಟುಂಬ ಪಾಟ್ನಾದಲ್ಲಿ ಎಫ್‌ಐಆರ್ ದಾಖಲಿಸಿತ್ತು. ಅದರಲ್ಲಿ ನಟಿ ರಿಯಾ ಚಕ್ರವರ್ತಿ ಅವರು ಸುಶಾಂತ್ ಸಿಂಗ್ ರಜಪೂತ್‌ಗೆ ಹಣಕಾಸಿನ ವಂಚನೆ ಎಸಗಿದ್ದಾರೆ ಹಾಗೂ ಆತ್ಮಹತ್ಯೆಗೆ ಪ್ರೇರೇಪಿಸಿದ್ದಾರೆ ಎಂದು ಆರೋಪಿಸಲಾಗಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News