ಬೆಂಗಳೂರಿನ ಕೋಮುಗಲಭೆ ಘಟನೆ ಅಮಾನವೀಯ: ಪ್ರಕಾಶ್ ರಾಜ್

Update: 2020-08-12 18:16 GMT

ಬೆಂಗಳೂರು, ಆ.12: ಸಾಮಾಜಿಕ ಜಾಲತಾಣದಲ್ಲಿ ಶಾಸಕ ಅಖಂಡ ಶ್ರೀನಿವಾಸಮೂರ್ತಿಯವರ ಸಂಬಂಧಿಕರೊಬ್ಬರು ಮುಸ್ಲಿಮ್ ಸಮುದಾಯದ ವಿರುದ್ಧ ಫೇಸ್‍ಬುಕ್ ಪೋಸ್ಟ್ ಸಂಬಂಧ ಬೆಂಗಳೂರಿನಲ್ಲಿ ನಡೆದ ಕೋಮುಗಲಭೆ ಘಟನೆ ಅಮಾನವೀಯ ಎಂದು ಬಹುಭಾಷ ನಟ ಪ್ರಕಾಶ್ ರಾಜ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ನಡೆದ ಕೋಮುಗಲಭೆ ಅನಾಗರಿಕವಾದದ್ದು. ಈ ಧಾರ್ಮಿಕ ಮತಾಂಧತೆಯನ್ನು ನಾನು ಬಲವಾಗಿ ಖಂಡಿಸುತ್ತೇನೆ. ಕಾನೂನನ್ನು ತಮ್ಮ ಕೈಗೆ ತೆಗೆದುಕೊಂಡ ಗೂಂಡಾಗಳಿಗೆ ಶಿಕ್ಷೆಯಾಗಬೇಕು. ಸಮಾಜದಲ್ಲಿದ್ದು ನಾವು ಇದನ್ನು ಒಪ್ಪಲು ಸಾಧ್ಯವಿಲ್ಲ ಎಂದು ಪ್ರಕಾಶ್ ರಾಜ್ ಟ್ವೀಟ್ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News