ಅಕ್ರಮ ಚಿನ್ನ ಸಾಗಾಟ: ಕಣ್ಣೂರು ವಿಮಾನ ನಿಲ್ದಾಣದಲ್ಲಿ ಇಬ್ಬರ ಬಂಧನ

Update: 2020-08-13 05:13 GMT

ಕಾಸರಗೋಡು, ಆ.13: ವಿದೇಶದಿಂದ ಅಕ್ರಮವಾಗಿ ಚಿನ್ನಾಭರಣ ಸಾಗಾಟ ಮಾಡುತ್ತಿದ್ದ ಆರೋಪದಲ್ಲಿ ಇಬ್ಬರನ್ನು ಕಣ್ಣೂರು ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ.

ಮಂಜೇಶ್ವರ ನಿವಾಸಿಗಳಾದ ಸತ್ತಾರ್ ಮತ್ತು ಸಮೀರ್ ಬಂಧಿತ ಆರೋಪಿಗಳು. ಬಂಧಿತರಿಂದ 45 ಲಕ್ಷ ರೂ. ವೌಲ್ಯದ ಚಿನ್ನಾಭರಣ ವಶಪಡಿಸಿಕೊಂಡಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

 ಇವರು ಶಾರ್ಜಾ ಮತ್ತು ದುಬೈಯಿಂದ ಆಗಮಿಸಿದವರೆನ್ನಲಾಗಿದೆ.
ಕಣ್ಣೂರು ವಿಮಾನ ನಿಲ್ದಾಣದಲ್ಲಿ ಇತ್ತೀಚಿನ ದಿನಗಳಿಂದ ಅಕ್ರಮ ಚಿನ್ನಾಭರಣ ಸಾಗಾಟ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಕಸ್ಟಮ್ಸ್ ತಪಾಸಣೆ ತೀವ್ರಗೊಳಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News