ಶ್ರೀಗಂಧ ಮರ ಮಾರಾಟ ಆರೋಪ: ಯುವಕನ ಬಂಧನ

Update: 2020-08-13 12:48 GMT

ಬೆಳಗಾವಿ, ಆ.13: ನಗರದ ನ್ಯೂಗುಡ್ ಶೆಡ್ ರಸ್ತೆಯಲ್ಲಿ ಶ್ರೀಗಂಧ ಮರದ ತುಂಡುಗಳನ್ನು ಅಕ್ರಮವಾಗಿ ಸಂಗ್ರಹಿಸಿ ಮಾರಾಟಕ್ಕೆ ಮುಂದಾಗಿದ್ದ ಯುವಕನನ್ನು ಇಲ್ಲಿನ ಖಡೇಬಜಾರ್ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಬೆಳಗಾವಿ ಆಟೋನಗರದ ವಿಶಾಲ ಹನುಮಂತ ಬೆಲೆಕರ(25) ಬಂಧಿತ ವ್ಯಕ್ತಿ ಎಂದು ತಿಳಿದುಬಂದಿದೆ.

ಬಂಧಿತನಿಂದ 4 ಲಕ್ಷ ಮೌಲ್ಯದ 20 ಕೆ.ಜಿ ಶ್ರಿಗಂಧ ಮರದ ತುಂಡುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಖಡೇಬಜಾರ್ ಎಸಿಪಿ ಎ.ಚಂದ್ರಪ್ಪ ನೇತೃತ್ವದಲ್ಲಿ ದಾಳಿ ನಡೆದಿದ್ದು, ಸದ್ಯ ಖಡೇಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News