ಬೆಂಗಳೂರು ಹಿಂಸಾಚಾರ ಪ್ರಕರಣ: 84 ಆರೋಪಿಗಳು ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರ

Update: 2020-08-14 12:30 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ಆ.14: ನಗರದ ಕೆಜಿ ಹಳ್ಳಿ ಹಾಗೂ ಡಿಜೆ ಹಳ್ಳಿ ಹಿಂಸಾಚಾರ ಪ್ರಕರಣದಲ್ಲಿ ಬಂಧಿತರಾಗಿರುವ 84 ಜನ ಆರೋಪಿಗಳನ್ನು ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರ ಮಾಡಲಾಗಿದೆ.

ಶುಕ್ರವಾರ ಬೆಳಗಿನ ಜಾವ ಮೂರು ಕೆಎಸ್ಸಾರ್ಟಿಸಿ ಬಸ್‍ಗಳಲ್ಲಿ ಭಾರೀ ಪೊಲೀಸ್ ಬಂದೋಬಸ್ತ್ ನಡುವೆ ಆರೋಪಿಗಳನ್ನು ಬಳ್ಳಾರಿ ಕಾರಾಗೃಹಕ್ಕೆ ಸ್ಥಳಾಂತರಿಸಲಾಗಿದೆ.

ಕೆಎಸ್ಸಾರ್ಟಿಸಿ ಬಸ್‍ಗಳ ಜತೆ ಎರಡು ಭದ್ರತಾ ವಾಹನಗಳನ್ನು ನಿಯೋಜಿಸಲಾಗಿದೆ. ಆರೋಪಿಗಳ ಸ್ಥಳಾಂತರದ ಬಗ್ಗೆ ಕಾರಾಗೃಹ ಅಧಿಕಾರಿಗಳಿಗೆ ಮಾಹಿತಿ ಇಲ್ಲದ ಕಾರಣಕ್ಕಾಗಿ ಇವರನ್ನು ಅಡ್ಮಿಷನ್ ಮಾಡಿಕೊಳ್ಳವುದು ಕೊಂಚ ವಿಳಂಬವಾಯಿತು. ವೈದ್ಯಕೀಯ ಪರೀಕ್ಷೆ ಮತ್ತು ಕೊರೋನ ಪರೀಕ್ಷೆ ಬಳಿಕವಷ್ಟೇ ಈ ಆರೋಪಿಗಳನ್ನು ಕಾರಾಗೃಹದ ಒಳಗಡೆ ಬಿಟ್ಟುಕೊಳ್ಳಲಾಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News