ಬೀಡಾಡಿ ದನ: ಮೇವು-ಆಹಾರಕ್ಕೆ ಅನುದಾನ ಬಿಡುಗಡೆ

Update: 2020-08-14 15:48 GMT

ಮಂಗಳೂರು, ಆ.14: ಕೋವಿಡ್-19 ಅವಧಿಯಲ್ಲಿ ಬೀಡಾಡಿ ಜಾನುವಾರುಗಳಿಗೆ ಮೇವಿನ ಕೊರತೆಯಾಗದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ ಬೀಡಾಡಿ ದನಗಳಿಗೆ ಮೇವು ಮತ್ತು ಪೌಷ್ಠಿಕ ಆಹಾರ ಒದಗಿಸಲು ಪಶುಪಾಲನಾ ಇಲಾಖೆಯಿಂದ ಅನುದಾನ ಬಿಡುಗಡೆಯಾಗಿದೆ.

ಸಾರ್ವಜನಿಕರು, ಪ್ರಾಣಿಪ್ರಿಯರು, ಸಂಘ-ಸಂಸ್ಥೆಗಳು ಬೀಡಾಡಿ ಜಾನುವಾರುಗಳಿಗೆ ಮೇವು, ಪೌಷ್ಠಿಕ ಆಹಾರ ನೀಡುತ್ತಿರುವ ಫೋಟೋ, ಮೇವು, ಪೌಷ್ಠಿಕ ಆಹಾರ ಖರೀದಿಸಿದ ರಶೀದಿ ಹಾಗೂ ಸ್ಥಳೀಯ ಪಶುವೈದ್ಯಾಧಿಕಾರಿಗಳ ಶಿಫಾರಸು ಪತ್ರವನ್ನು ಉಪ ನಿರ್ದೇಶಕರು (ಆಡಳಿತ), ಪಶುಪಾಲನಾ ಇಲಾಖೆ, ದ.,ಕ ಮಂಗಳೂರು ಕಚೇರಿಗೆ ಸಲ್ಲಿಸಿದರೆ ಇಲಾಖೆಯಿಂದ ವೆಚ್ಚ ಭರಿಸಲಾಗುತ್ತದೆ.

ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರು (ಆಡಳಿತ), ಪಶುಪಾಲನಾ ಇಲಾಖೆ, ದ.,ಕ ಮಂಗಳೂರು (0824- 2492337) ಅಥವಾ ತಾಲೂಕು ಪಶು ಆಸ್ಪತ್ರೆಯ ಸಹಾಯಕ ನಿರ್ದೇಶಕರನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News