ಎಸ್‌ಎಸ್‌ಎಲ್‌ಸಿ ಫಲಿತಾಂತ : ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಬಹುಮಾನ

Update: 2020-08-14 15:50 GMT

ಉಡುಪಿ, ಆ.14: ಈ ಬಾರಿಯ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ಬ್ರಾಹ್ಮಣ ಸಮುದಾಯದ ವಿದ್ಯಾರ್ಥಿಗಳಿಗೆ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ವತಿಯಿಂದ ನಗದು ಬಹುಮಾನ ನೀಡಲಾಗುವುದು ಎಂದು ಮಂಡಳಿ ಸದಸ್ಯರಾದ ಶಿವರಾಮ ಉಡುಪ ಸಾಲಿಗ್ರಾಮ ಮತ್ತು ಕಾರ್ಕಳ ರಾಜೇಶ ನಡ್ಯಂತಿಲ್ಲಾಯ ಸುಬ್ರಹ್ಮಣ್ಯ ತಿಳಿಸಿದ್ದಾರೆ.

ರಾಜ್ಯ ಪಠ್ಯಕ್ರಮದಲ್ಲಿ ಪರೀಕ್ಷೆ ಬರೆದು ತೇರ್ಗಡೆಯಾದ ಮೂರು ಮಂದಿಗೆ ರಾಜ್ಯ ಮಟ್ಟದಲ್ಲಿ ಪ್ರಥಮ, ದ್ವಿತೀಯ ಮತ್ತು ತೃತೀಯ ಬಹುಮಾನ ಅನುಕ್ರಮವಾಗಿ 15 ಸಾವಿರ, 10 ಸಾವಿರ ಮತ್ತು 5 ಸಾವಿರ ಹಾಗೂ ಜಿಲ್ಲಾ ಮಟ್ಟದಲ್ಲಿಯೂ ಹೆಚ್ಚು ಅಂಕ ಗಳಿಸಿದ ಮೂವರಿಗೆ ಬಹುಮಾನ ನೀಡುವುದಾಗಿ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಚ್.ಎಸ್. ಸಚ್ಚಿದಾನಂದಮೂರ್ತಿ ಪ್ರಕಟಿಸಿರುವುದಾಗಿ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News