ಆ. 15: ಎಸ್ಕೆಎಸ್ಸೆಸ್ಸೆಫ್ ವತಿಯಿಂದ ದ.ಕ. ಜಿಲ್ಲಾದ್ಯಂತ ಫ್ರೀಡಂ ಸ್ಕ್ವಾರ್

Update: 2020-08-14 16:56 GMT

ಬಂಟ್ವಾಳ, ಆ.14: ಎಸ್ಕೆಎಸ್ಸೆಸ್ಸೆಫ್ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಆ.15ರಂದು ಬೆಳಗ್ಗೆ ಜಿಲ್ಲೆಯ ಪ್ರತಿ ಶಾಖೆಗಳಲ್ಲಿ ಫ್ರೀಡಂ ಸ್ಕ್ವಾರ್ ಕಾರ್ಯಕ್ರಮ ನಡೆಯಲಿದೆ ಎಂದು ಎಸ್ಕೆಎಸ್ಸೆಸ್ಸೆಫ್ ಜಿಲ್ಲಾಧ್ಯಕ್ಷ ಸಯ್ಯಿದ್ ಅಮೀರ್ ತಂಙಳ್ ಕಿನ್ಯ ತಿಳಿಸಿದ್ದಾರೆ.

ಎಸ್ಕೆಎಸ್ಸೆಸ್ಸೆಫ್ ಜಿಲ್ಲಾ ಸಮಿತಿಯು ಪ್ರತಿ ವರ್ಷ ವಲಯ ಮಟ್ಟಗಳಲ್ಲಿ ದೊಡ್ಡ ಸಾರ್ವಜನಿಕ ಕಾರ್ಯಕ್ರಮಗಳ ಮೂಲಕ ಫ್ರೀಡಂ ಸ್ಕ್ವಾರ್ ನಡೆಸುತ್ತಿದ್ದು, ಈ ಬಾರಿ  ಕೊರೋನ ಹಿನ್ನೆಲೆ ಮತ್ತು ಸರಕಾರದ ಆದೇಶವನ್ನು ಪಾಲಿಸಿಕೊಂಡು ಪ್ರತೀ ಶಾಖೆಗಳಲ್ಲಿ ಸರಳವಾಗಿ ಆಚರಿಸಲಾಗುವುದು ಎಂದು ತಿಳಿಸಿದ್ದಾರೆ.

'ಸ್ವಾತಂತ್ರ್ಯ ಸರ್ವರಿಗೂ ಸಮಾನವಾಗಿರಲಿ' ಎಂಬ ಪ್ರಮೇಯದೊಂದಿಗೆ ನಡೆಯುವ ಕಾರ್ಯಕ್ರಮದಲ್ಲಿ ಕಾರ್ಯಕರ್ತರು ಚೌಕಾಕಾರದಲ್ಲಿ ನಿಂತು, ದ್ವಜಾಹರೋಹಣ ನಡೆಸಿ, ರಾಷ್ಟ್ರಗೀತೆ ಹಾಡಿ ತದನಂತರ ಪ್ರತಿಜ್ಞೆ ಗೈಯ್ಯುವ ಮೂಲಕ ಸರಳವಾಗಿ ಆಚರಿಸಲಾಗುವುದು. ಕೋವಿಡ್ -19 ಹಿನ್ನೆಲೆಯಲ್ಲಿ  ಸರ್ಕಾರದ ಎಲ್ಲಾ ಆದೇಶಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News