ಎಸ್ಸೆಸ್ಸೆಫ್ ಬೆಂಗಳೂರು ವತಿಯಿಂದ ಆ.15ರಂದು ಯೂಟ್ಯೂಬ್ ನಲ್ಲಿ ಸ್ವಾತಂತ್ರ್ಯೋತ್ಸವ ಸಂದೇಶ

Update: 2020-08-14 17:19 GMT

ಬೆಂಗಳೂರು, ಆ.14: ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ ಫೆಡರೇಶನ್ (ಎಸ್ಸೆಸ್ಸೆಫ್) ಬೆಂಗಳೂರು ಜಿಲ್ಲೆಯ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ 'ಸ್ವಸ್ಥ ಭಾರತ ನಿರ್ಮಾಣ ವಾಗಲಿ' ಎಂಬ ಘೋಷಣೆಯೊಂದಿಗೆ ಯೂಟ್ಯೂಬ್ ಚಾನೆಲ್ ಮೂಲಕ ಸ್ವಾತಂತ್ರ್ಯೋತ್ಸವ ಸಂದೇಶ ಕಾರ್ಯಕ್ರಮ ನಡೆಯಲಿದೆ.

ಆ.15 ರಂದು ಬೆಳಗ್ಗೆ 11 ಗಂಟೆಗೆ 'ಎಸ್ಸೆಸ್ಸೆಫ್ ಬೆಂಗಳೂರು' ಇದರ ಯೂಟ್ಯೂಬ್ ಚಾನೆಲ್ ನಲ್ಲಿ ಸ್ವಾತಂತ್ರ್ಯೋತ್ಸವ ಸಂದೇಶ ಲೈವ್ ಪ್ರಸಾರವಾಗಲಿದೆ.

ಹಿರಿಯ ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ, ಕರ್ನಾಟಕ ಮುಸ್ಲಿಂ ಜಮಾಅತ್ ಪ್ರಧಾನ ಕಾರ್ಯದರ್ಶಿ ಶಾಫಿ ಸಅದಿ ಬೆಂಗಳೂರು, ಕನ್ನಡ ಪ್ರಭ ಮತ್ತು ಸುವರ್ಣ ನ್ಯೂಸ್ ಮುಖ್ಯ ಸಂಪಾದಕ ರವಿ ಹೆಗ್ಡೆ, ಪ್ರಜಾವಾಣಿ ಸಂಪಾದಕ ಬಿ.ಎಂ ಹನೀಫ್, ಲೇಖಕ ಯೋಗೇಶ್ ಮಾಸ್ಟರ್, ಚಿಂತಕ ಅರವಿಂದ್ ಚೊಕ್ಕಾಡಿ, ಡಿವೈಎಫ್ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ, ಫ್ರೀಡಂ ಗೆಝೆಟ್ ಮುಖ್ಯ ಸಂಪಾದಕ ಮುಹಮ್ಮದ್ ಝೀಶಾನ್, ಎಸ್ಸೆಸ್ಸೆಫ್ ರಾಷ್ಟ್ರೀಯ ಕಾರ್ಯದರ್ಶಿ ಶರೀಫ್ ಮಾಸ್ಟರ್, ಎಸ್ಸೆಸ್ಸೆಫ್ ರಾಜ್ಯ ಪ್ರಧಾನ ಕಾರ್ಯದರ್ಶಿ ಯಾಕೂಬ್ ಮಾಸ್ಟರ್, ಎಸ್ಸೆಸ್ಸೆಫ್ ಬೆಂಗಳೂರು ಜಿಲ್ಲಾಧ್ಯಕ್ಷ ಹಬೀಬ್ ನೂರಾನಿ ಸ್ವಾತಂತ್ರ್ಯೋತ್ಸವ ಸಂದೇಶ ನೀಡಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News