ಉಡುಪಿ ಜಾಮಿಯ ಮಸೀದಿಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Update: 2020-08-15 05:48 GMT

ಉಡುಪಿ, ಆ.15: ಉಡುಪಿ ಜಾಮಿಯಾ ಮಸೀದಿಯಲ್ಲಿ 74ನೇ ಸ್ವಾತಂತ್ರ್ಯ ದಿನಾಚರಣೆ ಶನಿವಾರ ಬೆಳಗ್ಗೆ ನಡೆಯಿತು. ಕಾಪು ತಹಶೀಲ್ದಾರ್ ಮುಹಮ್ಮದ್ ಇಸ್ಹಾಕ್ ಧ್ವಜಾರೋಹಣಗೈದರು. ಜಾಮಿಯಾ ಮಸೀದಿಯ ಧರ್ಮಗುರು ಮೌಲಾನಾ ರಶೀದ್ ಅಹ್ಮದ್ ನದ್ವಿ ಸಂದೇಶ ನೀಡಿದರು.

ಕಾರ್ಯಕ್ರಮದಲ್ಲಿ ಮಸೀದಿಯ ಅಧ್ಯಕ್ಷ ಅರ್ಷದ್ ಅಹ್ಮದ್, ಪ್ರದಾನ ಕಾರ್ಯದರ್ಶಿ ಉಮರ್ ವಿ.ಎಸ್., ಮಸೀದಿಯ ಆಡಳಿತ ಸಮಿತಿ ಸದಸ್ಯರು, ಜಮಾಅತರು ಮತ್ತಿತರರು ಭಾಗವಹಿಸಿದ್ದರು. ರಿಯಾಝ್ ಅಹ್ಮದ್ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News