ಪಾಕಿಸ್ತಾನದ ಸ್ವಾತಂತ್ರ್ಯ ದಿನಾಚರಣೆ ಸಂದೇಶದಲ್ಲಿ ಮತ್ತೆ ಕಾಶ್ಮೀರ ವಿಷಯವನ್ನು ಕೆದಕಿದ ಇಮ್ರಾನ್ ಖಾನ್

Update: 2020-08-15 18:09 GMT
photo :twitter.com

ಇಸ್ಲಮಾಬಾದ್, ಆ.15: ಪಾಕಿಸ್ತಾನದಲ್ಲಿ ಶುಕ್ರವಾರ ನಡೆದ 74ನೇ ಸ್ವಾತಂತ್ರ ದಿನಾಚರಣೆ ಸಂದರ್ಭ ದೇಶದ ಜನತೆಗೆ ನೀಡಿದ ಸಂದೇಶದಲ್ಲಿ ಪ್ರಧಾನಿ ಇಮ್ರಾನ್ ಖಾನ್ ಮತ್ತೆ ಕಾಶ್ಮೀರದ ವಿಷಯವನ್ನು ಕೆದಕಿದ್ದಾರೆ.

ಅಂತಾರಾಷ್ಟ್ರೀಯ ವೇದಿಕೆಯಲ್ಲಿ ಕಾಶ್ಮೀರ ವಿಷಯವನ್ನು ಎತ್ತಲು ಹಲವು ಬಾರಿ ವಿಫಲವಾಗಿರುವ ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ , ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ರದ್ದುಪಡಿಸಿ ಅಲ್ಲಿನ ಜನತೆಗೆ ಅನ್ಯಾಯ ಮಾಡಲಾಗಿದೆ ಎಂದು ತಮ್ಮ ಭಾಷಣದಲ್ಲಿ ಹೇಳಿದರು. ಈ ಬಗ್ಗೆ ಪ್ರತಿಕ್ರಿಯಿಸಿರುವ ಭಾರತ, ಜಮ್ಮು ಕಾಶ್ಮೀರ ಸೇರಿದಂತೆ ಭಾರತದ ಆಂತರಿಕ ವಿಷಯಗಳಲ್ಲಿ ಹಸ್ತಕ್ಷೇಪ ನಡೆಸದಂತೆ ಪಾಕಿಸ್ತಾನಕ್ಕೆ ಸಲಹೆ ನೀಡಿದೆ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News