ವಾಜಪೇಯಿ ಅವರ ಮಾರ್ಗದರ್ಶನ ಮರೆಯಲು ಸಾಧ್ಯವಿಲ್ಲ: ಯಡಿಯೂರಪ್ಪ

Update: 2020-08-16 16:18 GMT

ಬೆಂಗಳೂರು, ಆ. 16: ಹಿರಿಯ ರಾಜಕೀಯ ಮುತ್ಸದ್ದಿ, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಪುಣ್ಯತಿಥಿಯ ಅಂಗವಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ತಮ್ಮ ಅಧಿಕೃತ ನಿವಾಸ ಕಾವೇರಿ ನಿವಾಸದಲ್ಲಿ ವಾಜಪೇಯಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.

ರವಿವಾರ ತಮ್ಮ ನಿವಾಸದಲ್ಲಿ ಏರ್ಪಡಿಸಿದ್ದ ಸರಳ ಕಾರ್ಯಕ್ರಮದಲ್ಲಿ ವಾಜಪೇಯಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದ ಅವರು, ಅಜಾತಶತ್ರು, ಕವಿ ಹೃದಯದ ಮಹಾನ್ ಮುತ್ಸದ್ದಿ ಅಟಲ್ ಬಿಹಾರಿ ವಾಜಪೇಯಿ ಅವರು, ಅವರಿಗೆ ನನ್ನ ಪ್ರಣಾಮಗಳು ಎಂದು ಇದೇ ವೇಳೆ ತಿಳಿಸಿದ್ದಾರೆ.

ವಾಜಪೇಯಿ ಅವರ ನಿಷ್ಠೆ, ಪ್ರಾಮಾಣಿಕತೆ, ಕಾರ್ಯವೈಖರಿಗಳು ಆದರ್ಶಪ್ರಾಯವಾದುದ್ದು. ವೈಯಕ್ತಿಕವಾಗಿ ವಾಜಪೇಯಿ ಅವರ ಪ್ರಭಾವ, ಮಾರ್ಗದರ್ಶನಗಳನ್ನು ನಾನು ಎಂದಿಗೂ ಮರೆಯಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಇಂದಿಲ್ಲಿ ಸ್ಮರಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News