ಭಾರೀ ಮಳೆ: ನಾರಾಯಣಪುರ ಜಲಾಶಯದಿಂದ ಕೃಷ್ಣಾ ನದಿಗೆ 2.60 ಸಾವಿರ ಕ್ಯೂಸೆಕ್

Update: 2020-08-17 09:51 GMT

ಶಹಾಪುರ, ಆ.17: ಮಹಾರಾಷ್ಟ್ರದ ಮಹಾಮಳೆಗೆ ನಾರಾಯಣಪುರ ಜಲಾಶಯ ತುಂಬಿರುವುದರಿಂದ ಕೃಷ್ಣಾ ನದಿಗೆ 2.60 ಸಾವಿರ ಕ್ಯೂಸೆಕ್ ನೀರು ಹರಿಯಬಿಡಲಾಗುತ್ತಿದೆ.

ಆದ್ದರಿಂದ ಶಹಾಪುರ - ದೇವದುರ್ಗ ಸಂಪರ್ಕ ರಸ್ತೆ ಸಂಪೂರ್ಣವಾಗಿ ಬಂದ್ ಮಾಡಲಾಗಿದೆ. ಸೇತುವೆಯ ಮೇಲೆ ನೀರು ಹರಿಯುತ್ತಿರುವುದರಿಂದ ವಾಹನ ಸಂಚಾರ ಸ್ಥಗಿತಗೊಳಿಸಲಾಗಿದೆ.

ನದಿ ತಟದ ಗ್ರಾಮಗಳಿಗೆ ಹಿನ್ನೀರು ನುಗ್ಗಿರುವುದರಿಂದ ಜನ ಹಾಗೂ ಜಾನುವಾರುಗಳನ್ನು ಸುರಕ್ಷಿತ ಸ್ಥಳಕ್ಕೆ ಸಾಗಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News