×
Ad

ಓಣಂ ಹಬ್ಬ: ಬೆಂಗಳೂರು, ಮೈಸೂರಿನಿಂದ ಕೇರಳಕ್ಕೆ ವಿಶೇಷ ಬಸ್ ವ್ಯವಸ್ಥೆ

Update: 2020-08-17 23:29 IST

ಬೆಂಗಳೂರು, ಆ.17: ರಾಜ್ಯ ರಸ್ತೆ ಸಾರಿಗೆ ನಿಗಮವು ಓಣಂ ಹಬ್ಬದ ಪ್ರಯುಕ್ತ ಕೇರಳ ಸಾರ್ವಜನಿಕರ ಪ್ರಯಾಣಿಕರ ಅನುಕೂಲಕ್ಕಾಗಿ ವಿಶೇಷ ಬಸ್ ವ್ಯವಸ್ಥೆ ಮಾಡಿದೆ. ಬೆಂಗಳೂರು, ಮೈಸೂರಿನಿಂದ ಕೇರಳಕ್ಕೆ ಹಾಗೂ ಕೇರಳದಿಂದ ಬೆಂಗಳೂರು ಮೈಸೂರಿಗೆ ಆ.24ರಿಂದ ಸೆ.6ರವರೆಗೆ ವಿಶೇಷ ಬಸ್ ವ್ಯವಸ್ಥೆ ಮಾಡಿದೆ.

ಬೆಂಗಳೂರಿನಿಂದ ಕಣ್ಣೂರು, ಎರ್ನಾಕುಲಂ, ಕಾನ್ಹಂಗಾಡ್, ಕಾಸರಗೂಡು, ಕೊಟ್ಟಾಯಂ, ಕಲ್ಲಿಕೋಟೆ, ಪಾಲಘಾಟ್, ತ್ರಿಶೂರು, ತಿರುವನಂತಪುರಂ ಮತ್ತು ವಡಕರಾ ಹಾಗೂ ಸದರಿ ಸ್ಥಳಗಳಿಂದ ಬೆಂಗಳೂರಿಗೆ, ಮೈಸೂರಿನಿಂದ ತಿರುವನಂತಪುರಂ, ಎರ್ನಾಕುಲಂ ಮತ್ತು ಕೊಟ್ಟಾಯಂ ಹಾಗೂ ಸದರಿ ಸ್ಥಳಗಳಿಂದ ಮೈಸೂರಿಗೆ ವಿಶೇಷ ಬಸ್ ವ್ಯವಸ್ಥೆ ಮಾಡಲಾಗಿದೆ ಎಂದು ರಾಜ್ಯ ರಸ್ತೆ ಸಾರಿಗೆ ನಿಗಮ ಪ್ರಕಟಣೆಯಲ್ಲಿ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News