ಸತ್ಯವನ್ನು ಗಟ್ಟಿಯಾಗಿ ಹೇಳುವ ಧೈರ್ಯವಿಲ್ಲದ 'ಕೈ' ನಾಯಕರು: ಡಾ.ಕೆ.ಸುಧಾಕರ್ ಟೀಕೆ

Update: 2020-08-18 14:20 GMT

ಬೆಂಗಳೂರು, ಆ. 18: `ಕನಿಷ್ಟಪಕ್ಷ ಸತ್ಯವನ್ನು ಗಟ್ಟಿಯಾಗಿ ಹೇಳುವ ಧೈರ್ಯವಿಲ್ಲದ ಕಾಂಗ್ರೆಸ್ ನಾಯಕರಿಗೆ ಅದೇ ಪಕ್ಷದ ದಲಿತ ಶಾಸಕ ಅಖಂಡ ಶ್ರೀನಿವಾಸಮೂರ್ತಿಯವರಿಗೆ ಕಾಂಗ್ರೆಸ್ ನಾಯಕರಿಂದ ನ್ಯಾಯ ಸಿಗಲು ಸಾಧ್ಯವೇ?' ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಇಂದಿಲ್ಲಿ ಟೀಕಿಸಿದ್ದಾರೆ.

ಮಂಗಳವಾರ ಸರಣಿ ಟ್ವೀಟ್ ಮಾಡಿರುವ ಅವರು, `ಈ ಜಗತ್ತಿನಲ್ಲಿ ಚಿರಕಾಲ ಉಳಿಯುವಂತಹದ್ದು ನಯ-ವಿನಯವೇ ಹೊರತು ಮೃಗೀಯತೆಯೂ ಅಲ್ಲ ದೇಹಬಲವೂ ಅಲ್ಲ. ಸತ್ಯಕ್ಕೆ ಸಾವಿಲ್ಲ' ಎಂದು ಪರೋಕ್ಷವಾಗಿ ಕಾಂಗ್ರೆಸ್ ಪಕ್ಷದ ಮುಖಂಡರ ವಿರುದ್ಧ ಹರಿಹಾಯ್ದಿದ್ದಾರೆ.

'ತನುವಿನ ಕೋಪ ತನ್ನ ಹಿರಿಯತನದ ಕೇಡು, ಮನದ ಕೋಪ ತನ್ನ ಅರಿವಿನ ಕೇಡು, ಮನೆಯೊಳಗಣ ಕಿಚ್ಚು ಮನೆಯ ಸುಟ್ಟಲ್ಲದೆ ನೆರೆ ಮನೆಯ ಸುಡದು ಕೂಡಲಸಂಗಮದೇವಾ.., ಬೆಂಗಳೂರು ಗಲಭೆ ಕಾರಣ ಯಾರು? ಎಂಬ ಸತ್ಯ ಹೊರಬರುತ್ತಿದೆ. ಕಾಂಗ್ರೆಸ್ ಕಾರ್ಪೋರೇಟರ್ ಗಳಾದ ಸಂಪತ್ ರಾಜ್, ಝಾಕೀರ್ ಅವರು ಸಿಸಿಬಿ ಪೊಲೀಸರ ವಿಚಾರಣೆಗೆ ಹಾಜರಾಗಿದ್ದಾರೆ' ಎಂದು ಸುಧಾಕರ್ ಉಲ್ಲೇಖಿಸಿ, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News