ಅಂಬೇಡ್ಕರ್ ಗೆ ಅಪಮಾನ ಆರೋಪ: ಆಯುಕ್ತರ ವಿರುದ್ಧ ದೂರು ಸಲ್ಲಿಸಿದ ಭೀಮ್ ಆರ್ಮಿ

Update: 2020-08-18 17:32 GMT

ಬೆಂಗಳೂರು, ಆ.18: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ(ಬಿಡಿಎ) ಆಯುಕ್ತ ಡಾ.ಎಚ್.ಆರ್.ಮಹಾದೇವ್ ಅವರು ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು ಅವಮಾನಿಸಿದ್ದು, ಈ ಸಂಬಂಧ ಅವರ ವಿರುದ್ಧ ದಲಿತ ದೌರ್ಜನ್ಯ ತಡೆ ಕಾಯ್ದೆ ಉಲ್ಲಂಘನೆ ಅಡಿ ಪ್ರಕರಣ ದಾಖಲಿಸಬೇಕೆಂದು ಇಲ್ಲಿನ ಶೇಷಾದ್ರಿಪುರಂ ಪೊಲೀಸ್ ಠಾಣೆಗೆ ಭೀಮ್ ಆರ್ಮಿ ಸಂಘಟನೆ ದೂರು ಸಲ್ಲಿಸಿದೆ.

ಮಂಗಳವಾರ ಭೀಮ್ ಆರ್ಮಿ ಸಂಘಟನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಜ್ ಗೋಪಾಲ್ ಅವರು ದೂರು ಸಲ್ಲಿಸಿದ್ದು, ಸ್ವಾತಂತ್ರ್ಯ ದಿನಾಚರಣೆದಂದು ಬಿಡಿಎ ಆಯುಕ್ತ ಡಾ.ಎಚ್.ಆರ್.ಮಹಾದೇವ್ ಅವರು ಡಾ.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪಾದರಕ್ಷೆಗಳನ್ನು ಧರಿಸಿ, ಪೂಜೆ ಸಲ್ಲಿಸುವ ಮೂಲಕ ಅಪಮಾನ ಮಾಡಿದ್ದಾರೆ. ಹೀಗಾಗಿ, ಇದರ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಉಲ್ಲೇಖಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News