ಕುತ್ತಾರ್: ಬಸ್ ನಿರ್ವಾಹಕನ ಕುಟುಂಬಕ್ಕೆ ರಾಣಿ ಅಬ್ಬಕ್ಕ ಬಸ್ ನೌಕರರ ಸಂಘದಿಂದ ಆರ್ಥಿಕ ನೆರವು

Update: 2020-08-19 11:21 GMT

ದೇರಳಕಟ್ಟೆ, ಆ. 19: ಇತ್ತೀಚೆಗೆ ಅನಾರೋಗ್ಯದಿಂದ ನಿಧನರಾದ ಖಾಸಗಿ ಬಸ್ ನಿರ್ವಾಹಕ ಮನೋಜ್ ಕುತ್ತಾರ್ ಅವರ ಮನೆಗೆ ಭೇಟಿ ನೀಡಿದ ರಾಣಿ ಅಬ್ಬಕ್ಕ ಬಸ್ಸು ನೌಕರರ ಸಂಘ ಮೃತರ ಪತ್ನಿ ಮತ್ತು ಕುಟುಂಬದವರಿಗೆ ಸಾಂತ್ವನ ಹೇಳಿ ಆರ್ಥಿಕ ನೆರವನ್ನು ನೀಡಿತು.

ಈ ಸಂದರ್ಭ ಮಾತನಾಡಿದ ರಾಣಿ ಅಬ್ಬಕ್ಕ ಬಸ್ಸು ನೌಕರರ ಸಂಘದ ಗೌರವಾಧ್ಯಕ್ಷ ಮುನೀರ್ ಕಾಟಿಪಳ್ಳ, ಲಾಕ್ ಡೌನ್ ಅವಧಿಯಲ್ಲಿ ಜಿಲ್ಲೆಯ ಬಸ್ಸು ನೌಕರರು ಎದುರಿಸಿದ ಆರ್ಥಿಕ ಮತ್ತು ಉದ್ಯೋಗದ ಸಮಸ್ಯೆಗಳ ಸಮಯದಲ್ಲಿ ಬಸ್ಸು ನೌಕರರು ಸಂಘಟಿತರಾಗಬೇಕೆಂಬ ಉದ್ದೇಶದಿಂದ ರಾಣಿ ಅಬ್ಬಕ್ಕ ಬಸ್ಸು ನೌಕರರ ಸಂಘವನ್ನು ಸ್ಥಾಪಿಸಲಾಯಿತು. ಸಂಘವು ಬಸ್ಸು ನೌಕರರ ಸಮಸ್ಯೆಗಳಿಗೆ ಸ್ಪಂದಿಸಲಿದ್ದು, ಸಂಘದ ವತಿಯಿಂದ ಇತ್ತೀಚೆಗೆ ಅನಾರೋಗ್ಯದ ಕಾರಣ ನಿಧನರಾದ ಖಾಸಗಿ ಬಸ್ ನಿರ್ವಾಹಕ ಮನೋಜ್ ಕುತ್ತಾರ್ ಅವರಿಗೆ ಆರ್ಥಿಕ ನೆರವನ್ನು ನೀಡಲಾಗಿದ್ದು, ಸಂಘವು ಮುಂದಿನ ದಿನಗಳಲ್ಲೂ ಮನೋಜ್ ಕುಟುಂಬದ ಜೊತೆ ನಿಲ್ಲಲಿದೆ ಎಂದು ಹೇಳಿದರು.

ನಿಯೋಗದಲ್ಲಿ ರಾಣಿ ಅಬ್ಬಕ್ಕ ಬಸ್ಸು ನೌಕರರ ಸಂಘದ ಅಧ್ಯಕ್ಷ ಅಲ್ತಾಫ್ ಮುಡಿಪು, ಕಾರ್ಯದರ್ಶಿ ಜಗದೀಶ್, ಉಪಾಧ್ಯಕ್ಷ ಬಾಝಿಕ್, ದಿವಾಕರ್, ನಝೀರ್, ಡಿವೈಎಫ್ಐ ಉಳ್ಳಾಲ ವಲಯ ಸಮಿತಿ ಅಧ್ಯಕ್ಷ ಅಶ್ರಫ್ ಕೆ.ಸಿ ರೋಡ್, ಡಿವೈಎಫ್ಐ ದೇರಳಕಟ್ಟೆ ಘಟಕದ ಅಧ್ಯಕ್ಷ ನವಾಜ್ ಉರುಮನೆ, ಡಿವೈಎಫ್ಐ ಜಿಲ್ಲಾ ಮುಖಂಡ ರಫೀಕ್ ಹರೇಕಳ, ಕಾರ್ಮಿಕ ಮುಂದಾಳು ಇಬ್ರಾಹಿಂ ಮದಕ, ರಾಹುಲ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News