ಹೊಸಂಗಡಿ : ಹಾಜಿ ಪಿ. ಮೊಯ್ದಿನ್ ಪಡುತೋಟ ನಿಧನ

Update: 2020-08-19 18:13 GMT

ಮುಲ್ಕಿ: ಹಳೆಯಂಗಡಿ ಸಮೀಪದ ಹೊಸಂಗಡಿ ಕದಿಕೆ ಕೇಂದ್ರ ಜುಮಾ ಮಸೀದಿಯ ಉಪಾಧ್ಯಕ್ಷರಾದ ಹಾಜಿ. ಪಿ ಮೊಯ್ದಿನ್  ಪಡುತೋಟ (75)ರವರು ಅಲ್ಪಕಾಲದ ಅಸೌಖ್ಯ ದಿಂದ ಬುಧವಾರ ರಾತ್ರಿ 8:15ಕ್ಕೆ ಪಡುತೋಟದ ಸ್ವಗೃಹದಲ್ಲಿ ನಿಧನರಾದರು.

ಅವರು ಮೂರು ಪುತ್ರರು ಓರ್ವ ಪುತ್ರಿಯನ್ನು ಅಗಲಿದ್ದಾರೆ.

ಕೇಂದ್ರ ಮಸೀದಿಯಲ್ಲಿ ಹಲವಾರು ವರ್ಷಗಳಿಂದ ಪದಾಧಿಕಾರಿಯಾಗಿದ್ದರು. ಅವರು ಪಡುಪಣಂಬೂರು ಹಳೆಯಂಗಡಿ ಪರಿಸರದಲ್ಲಿ ಹಿರಿಯ ಕಾಂಗ್ರೆಸ್ಸಿಗರು ಹಾಗೂ ಯುವಕರಿಗೆ ಮಾರ್ಗದರ್ಶಕರಾಗಿದ್ದರು.

ಅವರ ನಿಧನಕ್ಕೆ ಮುಲ್ಕಿ ಸೀಮೆ ಅರಸರಾದ ದುಗ್ಗಣ್ಣ ಸಾವಂತರು, ಮಾಜಿ ಸಚಿವ ಅಭಯಚಂದ್ರ ಜೈನ್, ಮುಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಧನಂಜಯ ಮಟ್ಟು, ಕೆಪಿಸಿಸಿ ಸದಸ್ಯ ವಸಂತ ಬರ್ನಾಡ್, ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾಲೆಟ್ ಪಿಂಟೊ, ಹೊಸಂಗಡಿ ಕದಿಕೆ ಕೇಂದ್ರ ಜುಮಾ ಮಸೀದಿ ಅಧ್ಯಕ್ಷ  ಕೆ. ಶಾಹುಲ್ ಹಮೀದ್ ಕದಿಕೆ. ಗೌತಮ್ ಜೈನ್ ಮುಲ್ಕಿ ಅರಮನೆ, ಹಳೆಯಂಗಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ಜಲಜ, ಮಾಜಿ ಸದಸ್ಯರಾದ ಅಬ್ದುಲ್ ಅಝೀಝ್ ಹಳೆಯಂಗಡಿ, ಮುಲ್ಕಿ ನಗರ ಪಂಚಾಯತ್ ಮಾಜಿ ಅಧ್ಯಕ್ಷ ಬಿ ಎಂ ಆಸಿಫ್, ಮಾಜಿ ಸದಸ್ಯ ಅಬ್ದುಲ್ ರಝಾಕ್ ಮುಲ್ಕಿ ಸಂತಾಪ ವ್ಯಕ್ತಪಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News