ಗಣೇಶೋತ್ಸವ: ಮಾರ್ಗಸೂಚಿ ಮಾರ್ಪಾಡಿಗೆ ಮುಖ್ಯ ಕಾರ್ಯದರ್ಶಿಗೆ ಬಿಬಿಎಂಪಿ ಮೇಯರ್ ಮನವಿ

Update: 2020-08-20 18:14 GMT

ಬೆಂಗಳೂರು, ಆ.20: ಕೋವಿಡ್ ಸಂದರ್ಭದಲ್ಲಿ ಗಣೇಶೋತ್ಸವ ಆಚರಣೆ ವಿಚಾರದಲ್ಲಿ ಮಾರ್ಗಸೂಚಿಗಳಲ್ಲಿ ಕೆಲ ಮಾರ್ಪಾಡು ಮಾಡುವಂತೆ ಕೋರಿ ಮೇಯರ್ ಗೌತಮ್ ಕುಮಾರ್ ಅವರು ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ವಿಜಯ್‍ಭಾಸ್ಕರ್ ಅವರಿಗೆ ಮನವಿ ಸಲ್ಲಿಸಿದ್ದಾರೆ.

ವಿಧಾನ ಸೌಧಸಲ್ಲಿ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಟಿ.ವಿಜಯ್‍ ಭಾಸ್ಕರ್ ಅವರನ್ನು ಭೇಟಿ ಮಾಡಿ ಮೇಯರ್ ಗೌತಮ್ ಕುಮಾರ್ ಹಾಗೂ ಗಣೇಶೋತ್ಸವ ಸಮಿತಿಯ ಪ್ರಕಾಶ್ ರಾಜ್ ಮನವಿ ಸಲ್ಲಿಸಿದರು.

ಈ ಕುರಿತು ಮಾತನಾಡಿದ ಮೇಯರ್, ಸರಕಾರ ಹೊರಡಿಸಿರುವ ಮಾರ್ಗಸೂಚಿ ಪ್ರಕಾರ ಒಂದು ವಾರ್ಡ್ ಗೆ ಒಂದೇ ಗಣೇಶ ಇರಿಸಬಹುದು. ಆದರೆ ಒಂದು ವಾರ್ಡ್ ನಲ್ಲಿ ಹಲವಾರು ಸಂಘ ಸಂಸ್ಥೆಗಳು ಇರುತ್ತವೆ. ಯಾರು ಗಣೇಶೋತ್ಸವ ಆಚರಿಸಬೇಕೆಂಬ ಗೊಂದಲಗಳು ಉಂಟಾಗುತ್ತವೆ. ಈ ಗೊಂದಲ ಪರಿಹರಿಸುವಂತೆ ಸೂಕ್ತ ನಿರ್ದೇಶನ ನೀಡುವಂತೆ ಮನವಿ ಸಲ್ಲಿಸಲಾಗಿದೆ. ಈ ಬಗ್ಗೆ ಮಾರ್ಗಸೂಚಿ ಮಾರ್ಪಾಡು ಮಾಡಿ, ಸ್ಪಷ್ಟತೆ ನೀಡುವಂತೆ ಸರಕಾರದ ಮುಖ್ಯ ಕಾರ್ಯದರ್ಶಿಗೆ ಮನವಿ ಮಾಡಿದ್ದೇವೆ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News