ಸಚಿವ ಶ್ರೀರಾಮುಲುರಿಗೆ ಮಾತೃ ವಿಯೋಗ

Update: 2020-08-21 04:22 GMT

ಬಳ್ಳಾರಿ, ಆ.21: ರಾಜ್ಯ ಆರೋಗ್ಯ ಸಚಿವ ಬಿ.ಶ್ರೀರಾಮುಲು ಅವರ ತಾಯಿ ಹೊನ್ನೂರಮ್ಮ (95) ಗುರುವಾರ ರಾತ್ರಿ ನಿಧನರಾಗಿದ್ದಾರೆ.

ಕೆಲ ದಿನಗಳ ಹಿಂದೆ ಕೊರೋನ ಸೋಂಕಿಗೆ ತುತ್ತಾಗಿದ್ದ ಹೊನ್ನೂರಮ್ಮ ಬಳಿಕ ಬೆಂಗಳೂರಿನ ಬೋರಿಂಗ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು. ಈ ಹಿನ್ನೆಲೆಯಲ್ಲಿ ಮೂರು ದಿನಗಳ ಹಿಂದೆ ಬಳ್ಳಾರಿಯಲ್ಲಿರುವ ಮನೆಗೆ ಆಗಮಿಸಿದ್ದರು. ಗುರುವಾರ ರಾತ್ರಿ ಅವರ ಆರೋಗ್ಯದಲ್ಲಿ ದಿಢೀರ್ ಏರುಪೇರಾಗಿದ್ದು, ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ.

ಶುಕ್ರವಾರ ಬೆಳಗ್ಗಿನ ಜಾವ ಕುಟುಂಬದ ಸದಸ್ಯರು ಹಾಗೂ ಆಪ್ತರ ಸಮ್ಮುಖದಲ್ಲಿ ಅಂತ್ಯ ಸಂಸ್ಕಾರ ನೆರವೇರಿತು.
ಈ ಬಗ್ಗೆ ಟ್ವೀಟ್ ಮೂಲಕ ಶ್ರೀರಾಮುಲು ಅವರು ತಾಯಿ ಅಗಲಿದ ದುಃಖವನ್ನು ಹಂಚಿಕೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News