ಅತಿವೃಷ್ಟಿ ಹಾನಿಗೆ ಕೇಂದ್ರದಿಂದ ಮುಂಗಡ 395 ಕೋಟಿ ರೂ. ಬಿಡುಗಡೆ: ಸಚಿವ ಆರ್.ಅಶೋಕ್
Update: 2020-08-21 16:48 GMT
ಬೆಂಗಳೂರು, ಆ.21: ಅತಿವೃಷ್ಟಿ ಹಾನಿಗೆ ಕೇಂದ್ರ ಸರ್ಕಾರ ಎಸ್ ಡಿಆರ್ ಎಫ್ ಫಂಡ್ ನಿಂದ ಮುಂಗಡ 395 ಕೋಟಿ ರೂ. ಬಿಡುಗಡೆ ಮಾಡಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿದ ಅವರು, ''ರಾಜ್ಯದಲ್ಲಿ ಅತಿವೃಷ್ಟಿಯಿಂದ ಉಂಟಾದ ಹಾನಿಗೆ ಕೂಡಲೇ ಹಣ ಬಿಡುಗಡೆ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಮನವಿ ಮಾಡಿದ್ದೆವು. ಇದೀಗ ರಾಜ್ಯದ ಮನವಿಗೆ ಕೂಡಲೇ ಸ್ಪಂದಿಸಿದ ಕೇಂದ್ರ ಸರ್ಕಾರ, ಎಸ್ ಡಿಆರ್ ಎಫ್ ಫಂಡ್ ಅಡಿ 395.5 ಕೋಟಿ ಹಣವನ್ನು ಈಗ ಮುಂಗಡವಾಗಿ ಬಿಡುಗಡೆ ಮಾಡಿರುವುದು ಸಂತಸ ತಂದಿದೆ'' ಎಂದು ತಿಳಿಸಿದ್ದಾರೆ.
'ಹಣ ಬಿಡುಗಡೆ ಮಾಡಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ರಾಜ್ಯದ ಜನತೆಯ ಪರವಾಗಿ ಮತ್ತು ವೈಯಕ್ತಿಕವಾಗಿ ಧನ್ಯವಾದಗಳನ್ನು ಅರ್ಪಿಸಲು ಬಯಸುತ್ತೇನೆ' ಎಂದು ಅವರು ಟ್ವೀಟ್ ಮಾಡಿದ್ದಾರೆ.