ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ
ಮಂಗಳೂರು, ಆ.21: ಭಾರತ ಚುನಾವಣಾ ಆಯೋಗವು ರಾಷ್ಟ್ರೀಯ ಮತದಾರರ ಪಟ್ಟಿಗಳ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2021ರ ವೇಳಾಪಟ್ಟಿ ಪ್ರಕಟಿಸಿದೆ.
ಮತದಾರರ ಪಟ್ಟಿ ಪೂರ್ವ ಪರಿಷ್ಕರಣೆ ಚಟುವಟಿಕೆ ಆ.10ರಿಂದ ನವೆಂಬರ್ 15ರವರೆಗೆ ನಡೆಯಲಿದೆ. ನ.16ರಂದು ಕರಡು ಮತದಾರರ ಪಟ್ಟಿಯ ಪ್ರಕಟಣೆ, ನ.16ರಿಂದ ಡಿ.15ರವರೆಗೆ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸ್ವೀಕರಿಸಲಾಗುವುದು. ಹಕ್ಕು ಮತ್ತು ಆಕ್ಷೇಪಣೆಗಳ ವಿಲೇವಾರಿಯು 2021ರ ಜ.5ರಂದು ನಡೆಯಲಿದ್ದು, ಅಂತಿಮ ಮತದಾರರ ಪಟ್ಟಿಯು ಜ.15ರಂದು ಪ್ರಕಟಗೊಳ್ಳಲಿದೆ.
ಅಗತ್ಯ ದಾಖಲೆ: ವಯಸ್ಸಿನ ಬಗ್ಗೆ ದಾಖಲೆಗಳು: ಶಾಲಾ ಪ್ರಮಾಣಪತ್ರ, ಜನನ ಪ್ರಮಾಣಪತ್ರ, ಆಧಾರ್ ಕಾರ್ಡ್, ಪಾಸ್ಪೋರ್ಟು, ಎಸೆಸೆಲ್ಸಿ/ಪಿಯುಸಿ ಅಂಕಪಟ್ಟಿ, ಪಾನ್ ಕಾರ್ಡ್ ಹಾಗೂ ವೈದ್ಯಕೀಯ ಪ್ರಮಾಣ ಪತ್ರ.
ವಾಸಸ್ಥಳದ ಬಗ್ಗೆ ದಾಖಲೆ: ಪಡಿತರ ಚೀಟಿ, ಗ್ಯಾಸ್ ಸಿಲಿಂಡರ್ ಸ್ವೀಕೃತಿ ರಶೀದಿ, ವಿದ್ಯುತ್ ಬಿಲ್ ಪಾವತಿ, ಬ್ಯಾಂಕ್ ಪಾಸ್ಬುಕ್, ಪಾಸ್ ಪೋರ್ಟ್, ವಾಹನ ಚಾಲನ ಪರವಾನಿಗೆ ಪ್ರತಿ, ಬಾಡಿಗೆ ಕರಾರು ಪತ್ರ ಹಾಗೂ ಇನ್ನಿತರ ದಾಖಲೆಗಳು. ಒಂದು ಪಾಸ್ ಪೋರ್ಟ್ ಅಳತೆಯ ಭಾವಚಿತ್ರಗಳು.
ಯಾವುದಕ್ಕೆ ಯಾವ ಅರ್ಜಿ: ನಮೂನೆ-6: 18 ವರ್ಷ ಪೂರೈಸಿದ ಹೊಸ ಮತದಾರರು ಹಾಗೂ ಒಂದು ವಿಧಾನಸಭಾ ಕ್ಷೇತ್ರದಿಂದ ಮತ್ತೊಂದೆಡೆ ವಾಸಸ್ಥಳ ಬದಲಾಯಿಸಿದವರು ಮತದಾರರ ಪಟ್ಟಿಗೆ ಸೇರ್ಪಡೆ ಮಾಡಲು.
ನಮೂನೆ-6ಎ: ಅನಿವಾಸಿ ಭಾರತೀಯರು ಮತದಾರರ ಪಟ್ಟಿಗೆ ತಮ್ಮ ಹೆಸರು ಸೇರ್ಪಡೆ ಮಾಡಲು, ನಮೂನೆ-7: ಮತದಾರರ ಪಟ್ಟಿಯಿಂದ ಹೆಸರನ್ನು ತೆಗೆದು ಹಾಕಲು. ನಮೂನೆ-8: ಹೆಸರು, ತಂದೆಯ ಹೆಸರು, ಮನೆ ವಿಳಾಸ, ವಯಸ್ಸಿಗೆ ಹಾಗೂ ಭಾವಚಿತ್ರಕ್ಕೆ ಸಂಬಂಧಿಸಿದ ದೋಷಗಳಿದ್ದರೆ ಸರಿಪಡಿಸಿಕೊಳ್ಳಲು, ನಮೂನೆ-8ಎ: ಒಂದೇ ವಿಧಾನಸಭಾ ಕ್ಷೇತ್ರದೊಳಗೆ ವಾಸಸ್ಥಳ ಬದಲಾಯಿಸಿದ ಸಂದರ್ಭದಲ್ಲಿ ಸಲ್ಲಿಸಬೇಕಿರುವ ಅರ್ಜಿ.
ಸಾರ್ವಜನಿಕರು ತಮ್ಮ ವ್ಯಾಪ್ತಿಯಲ್ಲಿರುವ ಮತದಾರರ ನೋಂದಣಾಧಿಕಾರಿ ಹಾಗೂ ಸಹಾಯಕ ಮತದಾರರ ನೋಂದಣಾಧಿಕಾರಿ ಕಚೇರಿಗೆ ಭೇಟಿ ನೀಡಿ ಪರಿಶೀಲಿಸಬಹುದು. ತಮ್ಮ ವ್ಯಾಪ್ತಿಯ ಮತಗಟ್ಟೆ ಅಧಿಕಾರಿಗಳಲ್ಲಿ ಪರಿಶೀಲಿಸಬಹುದು. ವೆಬ್ಪೋರ್ಟಲ್ www.ceokarnataka.kar.nic.in www.nvsp.in ಮತ್ತು ಮತದಾರರ ಸಹಾಯವಾಣಿ 1950 ಸಂಖ್ಯೆ ಕರೆಮಾಡಿ ಮಾಹಿತಿ ಪಡೆಯಬಹುದು ಎಂದು ದ.ಕ. ಜಿಲ್ಲಾ ಜಿಲ್ಲಾಧಿಕಾರಿ ಪ್ರಕಟನೆ ತಿಳಿಸಿದೆ.
ಮತದಾರರ ನೋಂದಣಾಧಿಕಾರಿಗಳು:
ಮಂಗಳೂರು ಉತ್ತರ, ದಕ್ಷಿಣ, ಮಂಗಳೂರು, ಬಂಟ್ವಾಳ, ಮೂಡುಬಿದಿರೆ ಕ್ಷೇತ್ರಗಳಿಗೆ ಮಂಗಳೂರು ಸಹಾಯಕ ಆಯುಕ್ತ ಮದನ್ ಮೋಹನ್ (9900111150) ಹಾಗೂ ಬೆಳ್ತಂಗಡಿ, ಪುತ್ತೂರು, ಸುಳ್ಯ ಕ್ಷೇತ್ರಗಳಿಗೆ ಪುತ್ತೂರು ಸಹಾಯಕ ಆಯುಕ್ತ ಡಾ.ಯತೀಶ್ ಉಳ್ಳಾಲ್(9535618438) ಮತದಾರರ ನೋಂದಣಾಧಿಕಾರಿಗಳಾಗಿದ್ದಾರೆ.
ಸಹಾಯಕ ನೋಂದಣಾಧಿಕಾರಿಗಳು:
* ಬೆಳ್ತಂಗಡಿ: ತಹಶೀಲ್ದಾರರು ಬೆಳ್ತಂಗಡಿ, ಮಹೇಶ್ (9902434583)
* ಮೂಡುಬಿದಿರೆ: ತಹಶೀಲ್ದಾರರು ಮೂಡುಬಿದಿರೆ, ಅನಿತಾಲಕ್ಷ್ಮೀ (7042976487)
* ಮಂಗಳೂರು ನಗರ ಉತ್ತರ: ತಹಶೀಲ್ದಾರರು ಮಂಗಳೂರು ಟಿ.ಜಿ. ಗುರುಪ್ರಸಾದ್ (96114731433)
* ಮಂಗಳೂರು ನಗರ ದಕ್ಷಿಣ: ಕಂದಾಯ ಅಧಿಕಾರಿ, ಮಹಾನಗರ ಪಾಲಿಕೆ ಮಂಗಳೂರು, ವಿಜಯ ಕುಮಾರ್ (9448177302)
* ಮಂಗಳೂರು: ಸಹಾಯಕ ಮತದಾರರ ನೋಂದಣಾಧಿಕಾರಿ-ತಹಶೀಲ್ದಾರರು ಮಂಗಳೂರು ಟಿ.ಜಿ. ಗುರುಪ್ರಸಾದ್ ಮೊಬೈಲ್: 96114731433
* ಬಂಟ್ವಾಳ: ತಹಶೀಲ್ದಾರರು ಬಂಟ್ವಾಳ, ರಶ್ಮಿ (9972061514)
* ಪುತ್ತೂರು: ತಹಶೀಲ್ದಾರರು ಪುತ್ತೂರು, ರಮೇಶ್ ಬಾಬು (94801688694)
* ಸುಳ್ಯ: ತಹಶೀಲ್ದಾರರು ಸುಳ್ಯ, ಅನಂತಶಂಕರ್ (9902541695)