ನರಿಂಗಾನ: ಕೊರೋನ ಸೋಂಕಿತರಿಗೆ ಉಚಿತ ಚಿಕಿತ್ಸೆ ನೀಡುವಂತೆ ಒತ್ತಾಯಿಸಿ ಡಿವೈಎಫ್ಐಯಿಂದ ಭಿತ್ತಿಪತ್ರ ಪ್ರದರ್ಶನ

Update: 2020-08-24 11:30 GMT

ನರಿಂಗಾನ: ಕೊರೋನ ಸೋಂಕಿತರಿಗೆ ಉಚಿತ, ಗುಣಮಟ್ಟದ ಚಿಕಿತ್ಸೆ ನೀಡುವಂತೆ ಒತ್ತಾಯಿಸಿ ಡಿವೈಎಫ್ಐ ವತಿಯಿಂದ ನರಿಂಗಾನ ಗ್ರಾಪಂ ಎದುರು ಭಿತ್ತಿಪತ್ರ ಪ್ರದರ್ಶನ ಸೋಮವಾರ ನಡೆಯಿತು.

ಸರಕಾರಿ ಆಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸೆ ನೀಡಲು, ಖಾಸಗಿ ಆಸ್ಪತ್ರೆಯನ್ನು ‌ನಿಯಂತ್ರಿಸಲು ಮತ್ತು ಜಿಲ್ಲೆಗೆ ಒಂದು ಸರಕಾರಿ ಮೆಡಿಕಲ್ ಕಾಲೇಜು ಸ್ಥಾಪನೆಗಾಗಿ ಒತ್ತಾಯಿಸಿ, ಕೊರೋನಾ ಹೆಸರಲ್ಲಿ ಆಸ್ಪತ್ರೆಗಳ ಲೂಟಿಕೋರ ನೀತಿಯನ್ನು ಖಂಡಿಸಿ, ಎಲ್ಲರಿಗೂ ಸಮಾನ ಗುಣಮಟ್ಟದ ಉಚಿತ ಚಿಕಿತ್ಸೆಗಾಗಿ ಒತ್ತಾಯಿಸಿ ಡಿವೈಎಫ್ಐ ಮೊಂಟೆಪದವು ಹಾಗೂ ಕೊಲ್ಲರಕೋಡಿ ಘಟಕಗಳ ನೇತೃತ್ವದಲ್ಲಿ ನರಿಂಗಾನ ಗ್ರಾಮ ಪಂಚಾಯತ್ ಕಚೇರಿ ಎದುರು ಭಿತ್ತಿಪತ್ರ ಪ್ರದರ್ಶನ ನಡೆಸಿ, ಮನವಿ ಸಲ್ಲಿಸಲಾಯಿತು.

ಸಭೆಯನ್ನುದ್ದೇಶಿಸಿ ಡಿವೈಎಫ್ಐ ಉಳ್ಳಾಲ ವಲಯ ಸಮಿತಿಯ ಅಧ್ಯಕ್ಷ ಅಶ್ರಫ್ ಕೆಸಿ ರೋಡ್ ಮಾತನಾಡಿದರು.

ಸಭೆಯಲ್ಲಿ ಡಿವೈಎಫ್ಐ ಉಳ್ಳಾಲ ವಲಯ ಸಮಿತಿ ಉಪಾಧ್ಯಕ್ಷ ರಝಾಕ್ ಮೊಂಟೆಪದವು, ಎಸ್.ಎಫ್.ಐ ಜಿಲ್ಲಾ ಉಪಾಧ್ಯಕ್ಷ ಶಮ್ಮಾಸ್ ಕೆಸಿ ರೋಡ್, ಡಿವೈಎಫ್ಐ ಮೊಂಟೆಪದವು ಘಟಕದ ಅಧ್ಯಕ್ಷ ಸಿರಾಜ್ ಬಿ.ಎಂ, ಕೊಲ್ಲರಕೋಡಿ ಘಟಕದ ಅಧ್ಯಕ್ಷ ಆಸಿಫ್ ಕೊಲ್ಲರಕೋಡಿ, ಶರೀಫ್ ವಿದ್ಯಾನಗರ, ಅಶ್ರಫ್ ಅಚ್ಚು ಸಾರ್ಥಬೈಲ್, ಹಿದಾಯತ್ ಮೊಂಟೆಪದವು, ಯೂಸುಫ್, ನಿಝಾಮ್, ಶಾಹಿಲ್, ನಾಸಿರ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News