ಎಐಸಿಸಿ ಹೊಣೆಗಾರಿಕೆ ಗಾಂಧಿ ಕುಟುಂಬ ವಹಿಸುವುದು ಸೂಕ್ತ: ಎಸ್.ಆರ್.ಪಾಟೀಲ್
Update: 2020-08-24 12:12 GMT
ಬೆಂಗಳೂರು, ಆ.24: ಎಐಸಿಸಿ ಹೊಣೆಗಾರಿಕೆಯನ್ನು ಗಾಂಧಿ ಕುಟುಂಬದವರೇ ವಹಿಸಿಕೊಳ್ಳುವುದು ಸೂಕ್ತ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಎಸ್.ಆರ್.ಪಾಟೀಲ್ ತಿಳಿಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಗಾಂಧಿ ಕುಟುಂಬದ ಹಿರಿಯರು ದೇಶಕ್ಕಾಗಿ ಅಪಾರವಾದ ತ್ಯಾಗ, ಬಲಿದಾನ ಮಾಡಿದ್ದಾರೆ. ತಮ್ಮ ಸರ್ವಸ್ವವನ್ನು ದೇಶಕ್ಕಾಗಿ ಅರ್ಪಣೆ ಮಾಡಿದ್ದಾರೆ. ಅಲ್ಲದೆ, ದೀರ್ಘವಾದ ಸೆರೆವಾಸವನ್ನು ಅನುಭವಿಸಿದ್ದಾರೆ. ಭಾರತವನ್ನು ಬಲಿಷ್ಠ ರಾಷ್ಟ್ರವನ್ನಾಗಿ ಕಟ್ಟುವಲ್ಲಿಯೂ ಗಾಂಧಿ ಕುಟುಂಬದ ಕೊಡುಗೆ ಅಪಾರವಾಗಿದೆ. ಗಾಂಧಿ ಕುಟುಂಬದಿಂದಲೆ ನಾಯಕತ್ವ ಮುಂದುವರೆದರೆ ಒಳ್ಳೆಯದು. ಎಐಸಿಸಿ ಹೊಣೆಗಾರಿಕೆಯನ್ನು ಗಾಂಧಿ ಕುಟುಂಬದವರೆ ವಹಿಸಿಕೊಳ್ಳುವುದು ಸೂಕ್ತ ಎಂದು ತಿಳಿಸಿದ್ದಾರೆ.