ಮಾರಕಾಸ್ತ್ರಗಳಿಂದ ದಾಳಿ ನಡೆ ಯುವಕನ ಕೊಲೆ

Update: 2020-08-24 17:42 GMT

ಬೆಂಗಳೂರು, ಆ.24: ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ, ಯುವಕನೋರ್ವನನ್ನು ಕೊಲೆಗೈದಿರುವ ಘಟನೆ ಇಲ್ಲಿನ ಕೋಣನಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ನಗರದ ಕೊತ್ತನೂರು ನಿವಾಸಿ ಪ್ರದೀಪ್ (29) ಮೃತ ಯುವಕ ಎಂದು ತಿಳಿದುಬಂದಿದೆ.

ಮೆಕ್ಯಾನಿಕ್ ಕೆಲಸ ಮಾಡುತ್ತಿದ್ದ ಪ್ರದೀಪ್ ಇತ್ತೀಚೆಗೆ ಹೊಸಕೋಟೆಗೆ ಮನೆ ಬದಲಾಯಿಸಿದ್ದು, ರವಿವಾರ ರಾತ್ರಿ 9ರ ವೇಳೆ ಕೊತ್ತನೂರಿಗೆ ಬಂದಿದ್ದರು. ಹಳೇ ದ್ವೇಷದ ಹಿನ್ನಲೆಯಲ್ಲಿ ಪ್ರದೀಪ್ ಅವರನ್ನು ಕರೆದೊಯ್ದ ಮೂವರು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ, ಕೊಲೆಗೈದು ಪರಾರಿಯಾಗಿದ್ದಾರೆ ಎನ್ನಲಾಗಿದೆ.

ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ಕೋಣನಕುಂಟೆ ಠಾಣಾ ಪೊಲೀಸರು ತೆರಳಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿ ಕೃತ್ಯವೆಸಗಿ ದುಷ್ಕರ್ಮಿಗಳಿಗಾಗಿ ತೀವ್ರ ಶೋಧ ನಡೆಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News