ನಂಜನಗೂಡು ಪ್ರಭಾರ ಆರೋಗ್ಯಾಧಿಕಾರಿಯಾಗಿ ಈಶ್ವರ್ ನೇಮಕ

Update: 2020-08-25 04:31 GMT

ಮೈಸೂರು,ಆ.24: ನಂಜನಗೂಡು ತಾಲೂಕು ಆರೋಗ್ಯಾಧಿಕಾರಿ ಡಾ.ಎಸ್.ಆರ್.ನಾಗೇಂದ್ರ ಆತ್ಮಹತ್ಯೆ ಹಿನ್ನಲೆಯಲ್ಲಿ ತೆರವಾದ ಆ ಜಾಗಕ್ಕೆ ಪ್ರಭಾರ ಟಿಎಚ್‍ಒ ಆಗಿ ಈಶ್ವರ್ ಅವರನ್ನು ನೇಮಿಸಲಾಗಿದೆ.

ನಾಗೇಂದ್ರ ಆತ್ಮಹತ್ಯೆ ಹಿನ್ನೆಲೆಯಲ್ಲಿ ತೆರವಾದ ಜಾಗಕ್ಕೆ ಟಿ.ನರಸೀಪುರ ತಾಲೂಕು ಮೂಗೂರಲ್ಲಿ ಕಾರ್ಯನಿರ್ವಹಿಸುತ್ತಿದ್ದ ಈಶ್ವರ್ ಅವರನ್ನು ವರ್ಗಾವಣೆ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಕಳೆದ ನಾಲ್ಕೈದು ದಿನಗಳ ಹಿಂದೆ ನಂಜನಗೂಡು ತಾಲೂಕು ಆರೋಗ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ನಾಗೇಂದ್ರ ಅವರು ಮನೆಯಲ್ಲೇ ಆತ್ಮಹತ್ಯೆಗೆ ಶರಣಾಗಿದ್ದರು. 

ಈ ನಡುವೆ ಇವರ ಸಾವಿಗೆ ಮೇಲಾಧಿಕಾರಿಗಳ ಕಿರುಕುಳ ಕಾರಣ ಎಂಬ ಆರೋಪ ಕೇಳಿ ಬಂದಿತ್ತು. ಮೈಸೂರು ಜಿ.ಪಂ ಸಿಇಒ ಅವರನ್ನ ವರ್ಗಾವಣೆ ಮಾಡುವಂತೆ ವೈದ್ಯರು ಮುಷ್ಕರ ನಡೆಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News