13 ಐಎಎಸ್ ಅಧಿಕಾರಿಗಳ ವರ್ಗಾವಣೆ
ಬೆಂಗಳೂರು, ಆ.25: ರಾಜ್ಯ ಸರಕಾರವು 13 ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಮಂಗಳವಾರ ಆದೇಶ ಹೊರಡಿಸಿದೆ.
ಬಳ್ಳಾರಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ನಂದಿನಿ ಕೆ.ಆರ್., ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರಾಗಿ ಅಕ್ಷಯ್ ಶ್ರೀಧರ್, ಕಲಬುರಗಿ ಮಹಾನಗರ ಪಾಲಿಕೆ ಆಯುಕ್ತರಾಗಿ ಲೋಖಂಡೆ ಸ್ನೇಹಲ್ ಸುಧಾಕರ್, ಕೊಡಗು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಭನ್ವರ್ ಸಿಂಗ್ ಮೀನಾರನ್ನು ವರ್ಗಾವಣೆ ಮಾಡಲಾಗಿದೆ.
ಕೊಳ್ಳೇಗಾಲ ಉಪ ವಿಭಾಗದ ಸಹಾಯಕ ಆಯುಕ್ತರಾಗಿ ಡಾ.ಗಿರೀಶ್ ದಿಲಿಪ್ ಬಾಡೋಲೆ, ಶಿರಸಿ ಉಪ ವಿಭಾಗದ ಸಹಾಯಕ ಆಯುಕ್ತರಾಗಿ ಆಕೃತಿ ಬನ್ಸಾಲ್, ತಿಪಟೂರು ಉಪ ವಿಭಾಗದ ಸಹಾಯಕ ಆಯುಕ್ತರಾಗಿ ದಿಗ್ವಿಜಯ ಬೋಡ್ಕೆ ಹಾಗೂ ಇಂಡಿ ಉಪ ವಿಭಾಗದ ಸಹಾಯಕ ಆಯುಕ್ತರನ್ನಾಗಿ ರಾಹುಲ್ ಶಿಂಧೆಯವರನ್ನು ವರ್ಗಾವಣೆ ಮಾಡಲಾಗಿದೆ.
ಮಡಿಕೇರಿ ಉಪ ವಿಭಾಗದ ಸಹಾಯಕ ಆಯುಕ್ತರನ್ನಾಗಿ ಈಶ್ವರ್ ಕುಮಾರ್ ಕಾಂಡೂ, ಬೀದರ್ ಉಪ ವಿಭಾಗದ ಸಹಾಯಕ ಆಯುಕ್ತರನ್ನಾಗಿ ಗರೀಮಾ ಪನ್ವಾರ್, ಧಾರವಾಡ ಉಪ ವಿಭಾಗದ ಸಹಾಯಕ ಆಯುಕ್ತರನ್ನಾಗಿ ಡಾ.ಗೋಪಾಲ್ ಕೃಷ್ಣ ಬಿ., ಚಿಕ್ಕೋಡಿ ಉಪ ವಿಭಾಗದ ಸಹಾಯಕ ಆಯುಕ್ತರನ್ನಾಗಿ ಉಕೇಶ್ ಕುಮಾರ್ ಹಾಗೂ ಬಸವಕಲ್ಯಾಣ ಉಪ ವಿಭಾಗದ ಸಹಾಯಕ ಆಯುಕ್ತರನ್ನಾಗಿ ಪಾಟೀಲ್ ಭುವನೇಶ್ ದೇವಿದಾಸ್ರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.