ಜಮೀನಿನ ದಾಖಲಾತಿ ಟ್ಯಾಂಪರಿಂಗ್ ಪ್ರಕರಣ: ಹಲವು ಕಡೆ ಎಸಿಬಿ ದಾಳಿ

Update: 2020-08-25 14:52 GMT

ಬೆಂಗಳೂರು, ಆ.25: ಜಮೀನಿನ ದಾಖಲಾತಿ ಟ್ಯಾಂಪರಿಂಗ್ ಪ್ರಕರಣ ಸಂಬಂಧ ಎಸಿಬಿ ಅಧಿಕಾರಿಗಳು ಉಪನೋಂದಣಾಧಿಕಾರಿ ನಿವಾಸ ಸೇರಿದಂತೆ ಹಲವು ಕಡೆ ದಾಳಿ ನಡೆಸಿದ್ದಾರೆ.

ಬೊಮ್ಮನಹಳ್ಳಿಯ ಹಿರಿಯ ಉಪನೋಂದಣಾಧಿಕಾರಿ, ಪರಮನಹಳ್ಳಿಯ ಎಸ್.ರಾಜಪ್ಪ, ಕೊತ್ತನೂರಿನ ಮೋಹನ್‍ಕುಮಾರ್ ಹಾಗೂ ಎಚ್‍ಆರ್ ಬಿಆರ್ ಲೇಔಟ್ ಮೋಹನ್‍ಕುಮಾರ್ ಎಂಬವರ ನಿವಾಸಗಳ ಮೇಲೆ ದಾಳಿ ನಡೆಸಲಾಗಿದೆ ಎಂದು ಎಸಿಬಿ ತಿಳಿಸಿದೆ.

ಬಿದರಹಳ್ಳಿ ಹೋಬಳಿ ವ್ಯಾಪ್ತಿಗೆ ಸೇರಿದ ಜಮೀನಿಗೆ ಸಂಬಂಧಪಟ್ಟಂತೆ ಬೆಂಗಳೂರು ಬೊಮ್ಮನಹಳ್ಳಿ ಉಪ ನೋಂದಣಾಧಿಕಾರಿಗಳ ಕಚೇರಿಯಲ್ಲಿನ ಅಧಿಕಾರಿ, ಸಿಬ್ಬಂದಿ ತಮ್ಮ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡು ಖಾಸಗಿ ವ್ಯಕ್ತಿಗಳೊಂದಿಗೆ ಶಾಮೀಲಾಗಿ ಸುಮಾರು 8 ಎಕರೆ ಜಮೀನಿನ ದಾಖಲಾತಿಗಳನ್ನು ಟ್ಯಾಂಪರಿಂಗ್ ಮಾಡಿರುವ ಕುರಿತು ಭ್ರಷ್ಟಾಚಾರ ನಿಗ್ರಹ ದಳ ಬೆಂಗಳೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News