ಮುಂಬೈ: ಕಟ್ಟಡ ಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ 15ಕ್ಕೆ ಏರಿಕೆ

Update: 2020-08-26 17:12 GMT

ಮುಂಬೈ, ಆ. 25: ಮಹಾರಾಷ್ಟ್ರದ ರಾಯಗಢ ಜಿಲ್ಲೆಯಲ್ಲಿ ಕುಸಿದ ಕಟ್ಟಡದ ಅವಶೇಷಗಳ ಅಡಿಯಲ್ಲಿ ಬುಧವಾರ ಬೆಳಗ್ಗೆ ಮತ್ತಿಬ್ಬರ ಮೃತದೇಹ ಪತ್ತೆಯಾಗಿದೆ. ಇದರೊಂದಿಗೆ ಈ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 15ಕ್ಕೆ ಏರಿಕೆಯಾಗದೆ ಎಂದು ಪೊಲೀಸರು ಅಧಿಕಾರಿ ತಿಳಿಸಿದ್ದಾರೆ.

ನಾಪತ್ತೆಯಾದ 17 ಮಂದಿಯಲ್ಲಿ 15 ಮಂದಿಯ ಮೃತದೇಹ ದೊರಕಿದ ಹಾಗೂ ಇಬ್ಬರನ್ನು ರಕ್ಷಿಸಿದ ಬಳಿಕ ಇಂದು 11.30ಕ್ಕೆ ಜಿಲ್ಲಾಡಳಿತ ರಕ್ಷಣಾ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಿದೆ. ದುರಂತದಲ್ಲಿ ಗಾಯಗೊಂಡ ಕನಿಷ್ಠ 9 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ. ‘‘ಕಟ್ಟಡದ ಅವಶೇಷಗಳ ಅಡಿಯಲ್ಲಿ ಬುಧವಾರ ಬೆಳಗ್ಗೆ 70 ವರ್ಷದ ಪುರುಷ ಹಾಗೂ 60 ವರ್ಷದ ಮಹಿಳೆಯ ಮೃತದೇಹ ಪತ್ತೆಯಾಗಿದೆ. ಇದರೊಂದಿಗೆ ಈ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 15ಕ್ಕೆ ಏರಿಕೆಯಾಗಿದೆ’’ ಎಂದು ರಾಯಗಢದ ಪೊಲೀಸ್ ಅಧೀಕ್ಷಕ ಅನಿಲ್ ಪರಾಸ್ಕರ್ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News