ಯುನಿವೆಫ್ ಎಜುಕೇಶನ್ ಫೋರಂ ನಿಂದ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

Update: 2020-08-26 17:20 GMT

ಮಂಗಳೂರು : ಯುನಿವೆಫ್ ಕರ್ನಾಟಕ ಎಜುಕೇಶನ್ ಫೋರಂ 2019-20 ನೇ ಸಾಲಿನ ಎಸೆಸೆಲ್ಸಿ ಮತ್ತು ಪಿ.ಯು.ಸಿ. ಪರೀಕ್ಷೆಗಳಲ್ಲಿ ಅತ್ಯಧಿಕ ಅಂಕ ಗಳಿಸಿರುವ ಆರ್ಥಿಕವಾಗಿ ಹಿಂದುಳಿದಿರುವ ಬಡ ಮುಸ್ಲಿಮ್  ವಿದ್ಯಾರ್ಥಿ ಮತ್ತು  ವಿದ್ಯಾರ್ಥಿನಿಯರಿಂದ ಅನುಕ್ರಮವಾಗಿ "ಮೌಲಾನಾ ಅಬುಲ್ ಕಲಾಮ್ ಆಝಾದ್" ಮತ್ತು "ಸರ್ ಅಲ್ಲಾಮಾ ಇಕ್ಬಾಲ್ ಪ್ರಶಸ್ತಿ" ಗಾಗಿ ಅರ್ಜಿಯನ್ನು ಆಹ್ವಾನಿಸಿದೆ.

ಎಸೆಸೆಲ್ಸಿಯಲ್ಲಿ ಅತ್ಯಧಿಕ ಅಂಕ ಗಳಿಸಿರುವ ವಿದ್ಯಾರ್ಥಿ/ವಿದ್ಯಾರ್ಥಿನಿಯರಿಗೆ "ಮೌಲಾನಾ ಅಬುಲ್ ಕಲಾಮ್ ಆಝಾದ್ ಪ್ರಶಸ್ತಿ" (ಓರ್ವ ವಿದ್ಯಾರ್ಥಿ ಮತ್ತು ಓರ್ವ ವಿದ್ಯಾರ್ಥಿನಿ -ಒಟ್ಟು ಎರಡು ಪ್ರಶಸ್ತಿಗಳು) ಮತ್ತು ದ್ವಿತೀಯ ಪಿ.ಯು.ಸಿ.ಯಲ್ಲಿ ಅತ್ಯಧಿಕ ಅಂಕ ಗಳಿಸಿರುವ ವಿದ್ಯಾರ್ಥಿ/ವಿದ್ಯಾರ್ಥಿನಿಯರಿಗೆ "ಸರ್ ಅಲ್ಲಾಮಾ ಇಕ್ಬಾಲ್ ಪ್ರಶಸ್ತಿ" (ಕಲೆ, ವಾಣಿಜ್ಯ ಮತ್ತು ವಿಜ್ಞಾನ ವಿಭಾಗದಲ್ಲಿ ತಲಾ ಒಂದರಂತೆ ಒಟ್ಟು ಮೂರು ಪ್ರಶಸ್ತಿಗಳು). ಪ್ರಶಸ್ತಿಯು ತಲಾ 5000 ರೂ. ನಗದು ಮತ್ತು ಪ್ರಮಾಣ ಪತ್ರ ವನ್ನೊಳಗೊಂಡಿರುವುದು.

ಷರತ್ತುಗಳು: ಪ್ರಸಕ್ತ ಸಾಲಿನಲ್ಲಿ (2019/20) ಅತ್ಯಧಿಕ ಅಂಕ ಪಡೆದಿರಬೇಕು.(500ಕ್ಕೂ ಮೇಲ್ಪಟ್ಟು). ಬಂದಿರುವ ಅರ್ಜಿಗಳಲ್ಲಿ ಅತ್ಯಧಿಕ ಅಂಕ ಪಡೆದ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿ/ವಿದ್ಯಾರ್ಥಿನಿಯರನ್ನು ಆರಿಸಲಾಗುವುದು. ಅರ್ಹ ವಿದ್ಯಾರ್ಥಿ ವಿದ್ಯಾರ್ಥಿನಿಯರು ತಮ್ಮ ಅಂಕ ಪಟ್ಟಿಯ ಪ್ರತಿ, ಫೋಟೋ, ಕಲಿತ ಶಾಲಾ/ ಕಾಲೇಜಿನ ದೃಢೀಕರಣ ಪತ್ರವನ್ನು ವಿಳಾಸ ಮತ್ತು ಮೊಬೈಲ್ ಸಂಖ್ಯೆಯೊಂದಿಗೆ ಅರ್ಜಿ ಸಲ್ಲಿಸಬೇಕು. ಅಂಕಪಟ್ಟಿ, ಮೊಬೈಲ್ ಸಂಖ್ಯೆ ಮತ್ತು ವಿಳಾಸವಿಲ್ಲದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಅರ್ಜಿ  ಸಲ್ಲಿಸಲು ಕೊನೆಯ ದಿನಾಂಕ 15 ಸೆಪ್ಟೆಂಬರ್ 2020. ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರಶಸ್ತಿ ವಿತರಣಾ ದಿನಾಂಕವನ್ನು ತಿಳಿಸಲಾಗುವುದು.

ಅರ್ಜಿ ಕಳುಹಿಸಬೇಕಾದ ವಿಳಾಸ: ಸಂಚಾಲಕರು, ಯುನಿವೆಫ್ ಕರ್ನಾಟಕ ಎಜುಕೇಶನ್ ಫೋರಂ, ಒಂದನೇ ಮಹಡಿ, ಲುಲು ಸೆಂಟರ್, ಇಂದಿರಾ ಆಸ್ಪತ್ರೆ ಬಳಿ, ಫಳ್ನೀರ್, ಮಂಗಳೂರು - 575 002. ಆಯ್ಕೆದಾರರ ತೀರ್ಮಾನವೇ ಅಂತಿಮ. ಯಾವುದೇ ಶಿಫ಼ಾರಸ್ಸುಗಳನ್ನು ಪರಿಗಣಿಸಲಾಗುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ ಯು.ಕೆ. ಖಾಲಿದ್, ಸಂಚಾಲಕರು, ಯುನಿವೆಫ್ ಕರ್ನಾಟಕ ಎಜುಕೇಶನ್ ಫೋರಂ 98451 99931 ಅವರನ್ನು ಸಂಪರ್ಕಿಸಬಹುದು ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News