×
Ad

ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ

Update: 2020-08-27 19:50 IST

ಉಡುಪಿ, ಆ.27: ಆತ್ಮ ಯೋಜನೆಯಡಿ ಜಿಲ್ಲಾ, ತಾಲೂಕು ಶ್ರೇಷ್ಠ ಪ್ರಶಸ್ತಿ ಹಾಗೂ ಶ್ರೇಷ್ಠ ಆಸಕ್ತ ಗುಂಪು ಪ್ರಶಸ್ತಿಗೆ ಹನ್ನೆರಡು ವಿಭಾಗಗಳಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಜಿಲ್ಲಾ ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿಗಾಗಿ ಆಯ್ಕೆಯಾದ ಜಿಲ್ಲೆಯ 10 ಮಂದಿ ರೈತರಿಗೆ ತಲಾ 25,000ರೂ. ಹಾಗೂ ತಾಲೂಕು ಮಟ್ಟದ ಚಟುವಟಿಕೆಗಳಡಿ ಆಯ್ಕೆಯಾದ ಆಯಾಯ ತಾಲೂಕಿನ 5 ಮಂದಿ ರೈತರಿಗೆ ತಲಾ 10,000ರೂ. ನಗದು ವಿತರಿಸಲಾಗುವುದು.

ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ರೈತರು ಭಾಗವಹಿಸಬಹುದಾದ ಕೃಷಿ ಮತ್ತು ಕೃಷಿ ಸಂಬಂಧಿತ ಚಟುವಟಿಕೆಗಳು: ಕೃಷಿಯಲ್ಲಿ ಸಮಗ್ರ ಬೆಳೆ ಪದ್ಧತಿ, ಸಮಗ್ರ ನೀರು ನಿರ್ವಹಣೆ, ಸಾವಯವ ಕೃಷಿ ಅಭಿವೃದ್ಧಿ, ವೈಜ್ಞಾನಿಕ ಯಂತ್ರೋಪಕರಣಗಳ ಬಳಕೆ, ತೋಟಗಾರಿಕೆ, ಹೈನುಗಾರಿಕೆ, ಕೋಳಿ ಸಾಕಾಣಿಕೆ, ಮೀನುಗಾರಿಕೆ, ರೇಷ್ಮೆ ಬೇಸಾಯ, ಹೈಟೆಕ್ ತಂತ್ರಜ್ಞಾನ ಅಳವಡಿಕೆ, ಕೃಷಿ ಸಂಸ್ಕರಣೆ ಹಾಗೂ ಅರಣ್ಯ ಕೃಷಿ, ಆಡು, ಕುರಿ, ಮೊಲ, ಇತ್ಯಾದಿ ಸಾಕಾಣಿಕೆ ಚಟುವಟಿಕೆಗಳಾಗಿವೆ.

ಜಿಲ್ಲೆಗಳ ಪ್ರಗತಿಪರ ರೈತರ ಗುಂಪುಗಳ ಸಾಧನೆಗಳನ್ನು ಗುರುತಿಸಿ ಪುರಸ್ಕರಿಸುವ ನಿಟ್ಟಿನಲ್ಲಿ ರೈತರ ಗುಂಪುಗಳಿಂದ ಆಸಕ್ತ ಗುಂಪು ಪ್ರಶಸ್ತಿಗೆ ಗರಿಷ್ಟ 5 ರೈತರ ಗುಂಪುಗಳಿಗೆ ಪ್ರಶಸ್ತಿ ನೀಡಲು ಅವಕಾಶವಿದ್ದು, ತಲಾ 20,000 ರೂ.ನದು ಬಹುಮಾನ ನೀಡಲಾಗುವುದು.

ಆಸಕ್ತ ರೈತರು ಅರ್ಜಿಗಳನ್ನು ಆಯಾಯ ತಾಲೂಕಿನ ಕೃಷಿ ನಿರ್ದೇಶಕರ ಕಚೇರಿಯಲ್ಲಿ ಅಥವಾ ರೈತ ಸಂಪರ್ಕ ಕೇಂದ್ರದಿಂದ ಪಡೆದು ಭರ್ತಿ ಮಾಡಿ ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಸೆ.7ರೊಳಗೆ ತಲುಪುವಂತೆ ಕಳುಹಿಸಬೇಕು. ಹೆಚ್ಚಿನ ಮಾಹಿತಿಗಳಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಛೇರಿಯನ್ನು ಸಂಪರ್ಕಿಸಲು ಜಂಟಿ ಕೃಷಿ ನಿರ್ದೇಶಕರ ಪ್ರಕಟಣೆ ತಿಳಿಸಿದೆ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News