×
Ad

ವಾಲ್ಮೀಕಿ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ

Update: 2020-08-27 19:55 IST

ಉಡುಪಿ, ಆ.27: ಪ್ರಸ್ತುತ ಸಾಲಿನ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡದ ಅಭಿವೃದ್ಧಿ ನಿಗಮದಿಂದ ಪರಿಶಿಷ್ಟ ಪಂಗಡದವರಿಗೆ ಹಾಗೂ ಅರಣ್ಯ ಆಧಾರಿತ ಆದಿವಾಸಿ, ಅಲೆಮಾರಿ, ಅರೆ ಅಲೆಮಾರಿ, ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಸಮುದಾಯದ ಜನಾಂಗಕ್ಕೆ ಸ್ವಯಂ ಉದ್ಯೋಗ, ನೇರಸಾಲ ಉದ್ಯಮಶೀಲತಾ, ಭೂ ಒಡೆತನ, ಮೈಕ್ರೋ ಕ್ರೆಡಿಟ್ ಹಾಗೂ ಗಂಗಾ ಕಲ್ಯಾಣ ಯೋಜನೆಗಳಡಿ ಸಾಲ ಸೌಲಭ್ಯಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ನಿಗಮದಿಂದ ಯಾವುದೇ ಸೌಲಭ್ಯ ಪಡೆಯದ 18ರಿಂದ 60 ವರ್ಷದ ಒಳಗಿನವರು ಅರ್ಜಿ ಸಲ್ಲಿಸಲು ಆ.31 ಕೊನೆಯ ದಿನವಾಗಿದೆ. ಅರ್ಜಿ ನಮೂನೆ ಯನ್ನು ನಿಗಮದ ವೆಬ್‌ಸೈಟ್-https://kmvstdcl.karnataka.gov.in - ನಲ್ಲಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ಬಿ ಬ್ಲಾಕ್, ಕೊಠಡಿ ಸಂಖ್ಯೆ 302, ರಜತಾದ್ರಿ ಮಣಿಪಾಲ-576104, ದೂರವಾಣಿ ಸಂಖ್ಯೆ: 0820-2574884ಗೆ ಸಂಪರ್ಕಿಸಬಹುದೆಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News