ಯು.ಗಂಗಾಧರ ಭಟ್

Update: 2020-08-27 16:54 GMT

ಬಂಟ್ವಾಳ, ಆ.27: ಅಳಿಕೆ ಶ್ರೀ ಸತ್ಯಸಾಯಿ ಲೋಕ ಸೇವಾ ಟ್ರಸ್ಟ್ ಅಧ್ಯಕ್ಷ ಯು.ಗಂಗಾಧರ ಭಟ್ (90) ಅಲ್ಪಕಾಲದ ಅಸೌಖ್ಯದಿಂದ ದೇರಳಕಟ್ಟೆ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ಬೆಳಗ್ಗಿನ ಜಾವ ನಿಧನರಾಗಿದ್ದಾರೆ. 

ಸತ್ಯಸಾಯಿ ಬಾಬಾ ಅವರ ಅನನ್ಯ ಭಕ್ತರಾಗಿದ್ದ ಅವರು ಮಡಿಯಾಲ ನಾರಾಯಣ ಭಟ್ ಅವರ ಜತೆಗೆ ಅಳಿಕೆ ಹಾಗೂ ಮುದ್ದೇನಹಳ್ಳಿ ವಿದ್ಯಾಸಂಸ್ಥೆ ಕಟ್ಟಿ ಬೆಳೆಸುವಲ್ಲಿ ಮುಂಚೂಣಿಯಲ್ಲಿದ್ದರು.

ತ್ಯಾಗ ಜೀವಿಯಾಗಿದ್ದ ಅವರು 1977ರಿಂದ ಇಲ್ಲಿಯ ತನಕ ಸುಮಾರು 43 ವರ್ಷಗಳ ಕಾಲ ಟ್ರಸ್ಟ್ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು. ಅಳಿಕೆ ಶ್ರೀ ಸತ್ಯಸಾಯಿಲೋಕ ಸೇವಾ ವಿದ್ಯಾಸಂಸ್ಥೆಗಳ ಆವರಣದಲ್ಲಿ ಅಂತಿಮ ವಿಧಿವಿಧಾನಗಳು ಮಧ್ಯಾಹ್ನದ ವೇಳೆಗೆ ನೆರವೇರಿತು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News

ವಸಂತಿ