​ಪುದು: ಎಸ್ಡಿಪಿಐ ವತಿಯಿಂದ ಆಯುಷ್ಮಾನ್ ಕಾರ್ಡ್ ನೋಂದಣಿ ಅಭಿಯಾನ

Update: 2020-08-27 17:12 GMT

ಫರಂಗಿಪೇಟೆ, ಆ. 27: ಸೋಷಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಪುದು  ಗ್ರಾಮ ಸಮಿತಿ ವತಿಯಿಂದ  ಭಾರತ ಸರಕಾರದ ಆರೋಗ್ಯ ಇಲಾಖೆಯ ಉಚಿತ ಚಿಕಿತ್ಸೆಯ ಆಯುಷ್ಮಾನ್ ಕಾರ್ಡ್ ನೋಂದಣಿ ಅಭಿಯಾನ ಗುರವಾರ ಫರಂಗಿಪೇಟೆಯ ಮಾಹಿತಿ ಮತ್ತು ಸೇವಾ ಕೇಂದ್ರದಲ್ಲಿ ನಡೆಯಿತು.

ಎಸ್ಡಿಪಿಐ ಪುದು ಗ್ರಾಮ ಸಮಿತಿ ಅಧ್ಯಕ್ಷ ಇಕ್ಬಾಲ್ ಅಮೆಮ್ಮಾರ್, ಮಂಗಳೂರು ಕ್ಷೇತ್ರ ಸಮಿತಿ ಉಪಾಧ್ಯಕ್ಷ ಹಾಜಿ ಸುಲೈಮಾನ್ ಉಸ್ತಾದ್, ಪುದು ಗ್ರಾಮ ಪಂಚಾಯತ್ ಸದಸ್ಯ ನಝೀರ್ ಕುಂಜತ್ಕಳ, ಮಾಹಿತಿ ಮತ್ತು ಸೇವಾ ಕೇಂದ್ರದ ಸಮಿತಿ ಅಧ್ಯಕ್ಷ ಬಶೀರ್ ಅಮೆಮ್ಮಾರ್, ಮುಖಂಡರಾದ ತೌಸೀಫ್ ಅರ್ಕುಳ, ಅನ್ಸಾರ್ ಅಮೆಮ್ಮಾರ್, ಶೆರೀಫ್ ಕುಂಪನಮಜಲ್, ಅಸ್ಲಮ್ ಅಮೆಮ್ಮಾರ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News