ಅಭಿರಾಮ್ ಜಿ.ಶಂಕರ್ ವರ್ಗಾವಣೆ: ಶರತ್ ಬಿ. ಮೈಸೂರಿನ ನೂತನ ಜಿಲ್ಲಾಧಿಕಾರಿ

Update: 2020-08-28 15:20 GMT
ಅಭಿರಾಮ್ ಜಿ.ಶಂಕರ್- ಶರತ್ ಬಿ.

ಬೆಂಗಳೂರು, ಆ.28: ರಾಜ್ಯ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಕಾರ್ಯದರ್ಶಿ ವಾಸಿರೆಡ್ಡಿ ವಿಜಯ ಜ್ಯೋತ್ಸ್ನ ಅವರನ್ನು ಕಲಬುರಗಿ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ, ಮೈಸೂರು ಜಿಲ್ಲೆಯ ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ಅವರನ್ನು ಮೈಸೂರಿನ ಆಡಳಿತ ತರಬೇತಿ ಕೇಂದ್ರದ ಜಂಟಿ ನಿರ್ದೇಶಕರನ್ನಾಗಿ ವರ್ಗಾವಣೆ ಮಾಡಲಾಗಿದೆ.

ಮೈಸೂರಿನ ಆಡಳಿತ ತರಬೇತಿ ಕೇಂದ್ರದ ಜಂಟಿ ನಿರ್ದೇಶಕರ ಹುದ್ದೆಗೆ ಐಎಎಸ್ ಅಧಿಕಾರಿ ಪಾಟೀಲ ಎಲಗೌಡ ಶಿವನಗೌಡ ಅವರ ವರ್ಗಾವಣೆ ಆದೇಶವನ್ನು ರದ್ದುಗೊಳಿಸಲಾಗಿದೆ. ಕಲಬುರಗಿ ಜಿಲ್ಲೆಯ ಜಿಲ್ಲಾಧಿಕಾರಿಯಾಗಿದ್ದ ಶರತ್ ಬಿ. ಅವರನ್ನು ಮೈಸೂರು ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ.

ಕಲಬುರಗಿ ನೂತನ ಡಿಸಿಯಾಗಿ ವಿಜಯ ಜ್ಯೋತ್ಸ್ನ ನೇಮಕ

ಕಲಬುರಗಿ: ಜಿಲ್ಲಾಧಿಕಾರಿ ಶರತ್ ಬಿ. ಅವರನ್ನು ವರ್ಗಾವಣೆ ಮಾಡಿ ಕಲಬುರಗಿ ನೂತನ ಜಿಲ್ಲಾಧಿಕಾರಿಯಾಗಿ ರಾಜ್ಯ ಕಟ್ಟಡ ಕಾರ್ಮಿಕರ ಬೋರ್ಡ್ ಅಧಿಕಾರಿಯಾಗಿದ್ದ, ಐಎಎಸ್ ವಸಿರೆಡ್ಡಿ ವಿಜಯ ಜ್ಯೋತ್ಸ್ನ ಅವರನ್ನು ನೇಮಕ ರಾಜ್ಯ ಸರಕಾರ ಅಧೀನ ಕಾರ್ಯದರ್ಶಿ ಜೇಮ್ಸ್ ಥರಕನ್ ಅವರು ಆದೇಶ ಹೊರಡಿಸಿದ್ದಾರೆ.

ಶರತ್ ಬಿ. ಅವರನ್ನು ಮೈಸೂರು ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಿ ತಕ್ಷಣದಿಂದ ಜಾರಿಗೆ ಬರಲು ಆದೇಶದಲ್ಲಿ ಸೂಚಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News