ಗಣೇಶ ಮೂರ್ತಿ ವಿಸರ್ಜನೆ ವೇಳೆ ಇಬ್ಬರು ಬಾಲಕರು ನೀರು ಪಾಲು

Update: 2020-08-28 15:49 GMT

ಬೆಂಗಳೂರು, ಆ.28: ಗಣೇಶ ಮೂರ್ತಿ ವಿಸರ್ಜನೆಗೆ ಹೋದ ಇಬ್ಬರು ಬಾಲಕರು ನೀರು ಪಾಲಾಗಿರುವ ಘಟನೆ ತಮಿಳುನಾಡಿನ ಸೂಳಗಿರಿ ಸಮೀಪದ ಅನಾಸಂದ್ರಂ ಕೆರೆಯಲ್ಲಿ ನಡೆದಿದೆ.

ಸೂಳಗಿರಿ ನಿವಾಸಿಗಳಾದ ಭೂಪತಿ(12), ಮುರಳಿ(12) ಮೃತ ಬಾಲಕರು ಎಂದು ತಿಳಿದುಬಂದಿದೆ.

ಮೂರು ದಿನಗಳ ಹಿಂದೆ ಮೂರ್ತಿ ಪ್ರತಿಷ್ಠಾಪಿಸಿ ನಾಲ್ಕು ದಿನಗಳ ಬಳಿಕ ಗುರುವಾರ ಸ್ನೇಹಿತರೊಂದಿಗೆ ಕೆರೆಯಲ್ಲಿ ಮೂರ್ತಿ ವಿಸರ್ಜನೆ ಮಾಡಲು ಹೋಗಿದ್ದರು. ಆಳ ಅರಿಯದೇ ಕೆರೆಗಿಳಿದಿದ್ದು, ಎಲ್ಲರೂ ನೋಡುತ್ತಿದ್ದಂತೆ ಮೂರ್ತಿ ಜೊತೆ ಇಬ್ಬರು ಬಾಲಕರು ನೀರು ಪಾಲಾಗಿದ್ದಾರೆ.

ಸ್ಥಳಕ್ಕೆ ಸೂಳಗಿರಿ ಪೊಲೀಸರು ಭೇಟಿ ನೀಡಿ ಸ್ಥಳೀಯರ ನೆರವಿನಿಂದ ಮೃತದೇಹಗಳನ್ನು ಹೊರ ತೆಗೆದಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News