ಸೆ.3ರವರೆಗೆ ಮಳೆ ಪ್ರಮಾಣ ಕಡಿಮೆ ಸಾಧ್ಯತೆ: ಹವಾಮಾನ ಇಲಾಖೆ

Update: 2020-08-29 14:56 GMT

ಬೆಂಗಳೂರು, ಆ.2: ರಾಜ್ಯದಲ್ಲಿ ಆ.30ರಿಂದ ಸೆ.3ರವರೆಗೆ ಮಳೆ ಪ್ರಮಾಣ ಕಡಿಮೆ ಆಗಲಿದ್ದು, ದಕ್ಷಿಣ ಒಳನಾಡಿನಲ್ಲಿ ಮಳೆ ಸಾಮಾನ್ಯ ಮಟ್ಟದಲ್ಲಿ ಆಗಬಹುದು ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್ ಪಾಟೀಲ್ ತಿಳಿಸಿದ್ದಾರೆ.

ಸೆ.4ರಿಂದ ಸೆ.10ರವರೆಗೆ ದಕ್ಷಿಣ ಒಳನಾಡಿನಲ್ಲಿ ಮಳೆ ಸಾಮಾನ್ಯ ಮಟ್ಟಕ್ಕಿಂತ ಹೆಚ್ಚಾಗಲಿದೆ. ಉತ್ತರ ಒಳನಾಡಿನಲ್ಲಿ ಸಾಮಾನ್ಯವಾಗಿರಲಿದೆ ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಸಾಮಾನ್ಯ ಮಟ್ಟಕ್ಕಿಂತ ಕಡಿಮೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದರು.

ಕಳೆದ ವಾರದ ಮಳೆ ಪ್ರಮಾಣ ಗಮನಿಸಿದರೆ, ತಮಿಳುನಾಡು ಕರಾವಳಿಯಲ್ಲಿ ಟ್ರಫ್ ನಿರ್ಮಾಣವಾದ್ದರಿಂದ ಕೋಲಾರ, ಬೆಂಗಳೂರು ಸುತ್ತಮುತ್ತ ಮಳೆಯಾಯಿತು. ಈಶಾನ್ಯ ಅರಬ್ಬೀ ಸಮುದ್ರಲ್ಲಿ ಮೇಲ್ಮೈ ಸುಳಿಗಾಳಿ ಹಾಗೂ ಬಂಗಾಳ ಉಪಸಾಗರದಲ್ಲಿ ವಾಯುಭಾರ ಕುಸಿತವಾದ ಕಾರಣ ಆ.21ರಿಂದ 27 ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ಮಾನ್ಸೂನ್ ಚುರುಕಾಗಿದ್ದು, ಆ.25ರಿಂದ 27ರ ನಂತರ ದುರ್ಬಲವಾಯಿತು ಎಂದು ಮಾಹಿತಿ ನೀಡಿದರು.

ಉತ್ತರ ಒಳನಾಡಿನಲ್ಲಿ 21ನೇ ತಾರೀಕಿನಂದು ಮಾನ್ಸೂನ್ ಚುರುಕಾಗಿದ್ದು, 24-26 ರಿಂದ ಮಳೆಯ ಪ್ರಮಾಣ ತಗ್ಗಿದೆ. ದಕ್ಷಿಣ ಒಳನಾಡಿನಲ್ಲಿ ಕೂಡಾ 20ರಿಂದ 26ರವರೆಗೆ ಮಾನ್ಸೂನ್ ದುರ್ಬಲಗೊಂಡಿತ್ತು. ಈ ಅವಧಿಯಲ್ಲಿ ಗೇರುಸೊಪ್ಪ, ಆಗುಂಬೆ, ಕದ್ರದಲ್ಲಿ ಉತ್ತಮ ಮಳೆಯಾಗಿತ್ತು. ಕಳೆದ ವಾರ ದಕ್ಷಿಣ ಒಳನಾಡಿನಲ್ಲಿ ಶೇ.85ರಷ್ಟು ಮಳೆ ಪ್ರಮಾಣ ಕಡಿಮೆಯಾಗಿದೆ. ಉತ್ತರ ಒಳನಾಡು ಹಾಗೂ ಕರಾವಳಿಯಲ್ಲಿ ಮಳೆ ಪ್ರಮಾಣ ಸಾಧಾರಣವಾಗಿದೆ. ಜೂನ್ ನಿಂದ ಆ.26 ರವರೆಗೆ ರಾಜ್ಯದಲ್ಲಿ ಉತ್ತಮ ಮಳೆಯಾಗಿದೆ ಎಂದು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News