ಲಂಚಕ್ಕೆ ಬೇಡಿಕೆ ಆರೋಪ: ಪಿಎಸ್ಸೈ, ಪೇದೆ ವಿರುದ್ಧ ಎಫ್‍ಐಆರ್ ದಾಖಲಿಸಿದ ಎಸಿಬಿ

Update: 2020-08-30 13:48 GMT

ಬೆಂಗಳೂರು, ಆ. 30: ಲಾಕ್‍ಡೌನ್ ಸಂದರ್ಭದಲ್ಲಿ ಸರಕಾರಿ ವಾಹನದಲ್ಲಿ ಅಕ್ರಮವಾಗಿ ಮದ್ಯ ಸರಬರಾಜು ಮಾಡುತ್ತಿದ್ದ ಆರೋಪಿಗಳಿಂದ ಲಂಚಕ್ಕೆ ಬೇಡಿಕೆ ಇಟ್ಟ ಆರೋಪದಡಿ ಪಿಎಸ್ಸೈ, ಪೇದೆಯೊಬ್ಬರ ವಿರುದ್ಧ ಎಸಿಬಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಎಲೆಕ್ಟ್ರಾನಿಕ್ ಪೊಲೀಸ್ ಠಾಣೆಯ ಇನ್‍ಸ್ಪೆಕ್ಟರ್ ಕಿಶೋರ್ ಕುಮಾರ್ ಹಾಗೂ ಕಾನ್‍ಸ್ಪೇಬಲ್ ಜನಾರ್ಧನ್ ವಿರುದ್ಧ ಎಸಿಬಿ ಪೊಲೀಸರು ಎಫ್ ಐಆರ್ ದಾಖಲಿಸಿಕೊಂಡಿದ್ದಾರೆ.

ಪೊಲೀಸ್ ಇನ್ಸ್‍ಪೆಕ್ಟರ್ ಕಿಶೋರ್ ಕುಮಾರ್ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಎಸಿಬಿ ತನಿಖಾಧಿಕಾರಿಗಳು, ನೋಟಿಸ್ ಜಾರಿಗೊಳಿಸಿ ವಿಚಾರಣೆ ನಡೆಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News