ಪ್ರತಾಪ್ ಸಿಂಹ ಹಗರಣಗಳನ್ನು ದಾಖಲೆ ಸಮೇತ ಸಾಬೀತುಪಡಿಸುತ್ತೇನೆ: ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್

Update: 2020-08-30 17:38 GMT

ಮೈಸೂರು,ಆ.30: ಸಂಸದ ಪ್ರತಾಪ್ ಸಿಂಹ ಒಬ್ಬ ಬ್ಲೂ ಫಿಲ್ಮ್ ಹೀರೋ. ಅವನ ಹಗರಣಗಳನ್ನ ನಾನು ದಾಖಲೆ ಸಮೇತ ಸಾಬೀತುಪಡಿಸುತ್ತೇನೆ. ನನ್ನ ಮೇಲಿನ ಆರೋಪವನ್ನ ಪ್ರತಾಪ್ ಸಿಂಹ ಸಾಬೀತುಪಡಿಸಲಿ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಸವಾಲು ಹಾಕಿದರು.

ನಗರದ ಕಾಂಗ್ರೆಸ್ ಕಚೇರಿಯಲ್ಲಿ ರವಿವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಬ್ಲಾಕ್ ಮೇಲ್ ಗಿರಾಕಿ ಎಂಬ ಸಂಸದ ಪ್ರತಾಪ್ ಸಿಂಹ ಹೇಳಿಕೆ ವಿರುದ್ಧ ವಾಗ್ದಾಳಿ ನಡಸಿದರು. ನಾನು ಬ್ಲಾಕ್ ಮೇಲ್ ಮಾಡಿದ್ದರೆ ದಾಖಲೆಯೊಂದಿಗೆ ಚರ್ಚೆಗೆ ಬರಲಿ. ಸಾಬೀತಾದರೆ ಸಾರ್ವಜನಿಕವಾಗಿ ನಾನು ನೇಣು ಹಾಕಿಕೊಳ್ಳುತ್ತೇನೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಸಂಸದ ಪ್ರತಾಪ್ ಸಿಂಹ ಅವರಿಗೆ ಸವಾಲು ಹಾಕಿದ್ದಾರೆ.

ನಾವಿಬ್ಬರೂ ಡಿಬೇಟ್ ಮಾಡೋಣ. ನಿಮ್ಮ ಮೇಲಿನ ಆರೋಪಕ್ಕೆ ನಾನು ಸಾಕ್ಷಿ ಕೊಡುತ್ತೇನೆ. ನಿಮ್ಮ ವಿರುದ್ದ ಡಿಬೇಟ್ ನಲ್ಲಿ ಸಾಕ್ಷಿ ಕೊಡಲಿಲ್ಲ ಅಂದರೆ ಕಲಾಮಂದಿರದ ಹೊರಗೆ ನೇಣು ಹಾಕಿಕೊಳ್ಳುತ್ತೇನೆ. ನಾನೇನಾದರೂ ಯಾರ ಬಳಿಯಾದರು ದುಡ್ಡು ತಿಂದಿದ್ದರೆ ಪ್ರತಾಪ್ ಸಿಂಹ ಸಾಬೀತು ಮಾಡಲಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನನ್ನ ಬಳಿ ಪ್ರತಾಪ್ ಸಿಂಹಗೆ ಸಂಬಂಧ ಪಟ್ಟ ನಾಲ್ಕು ವಿಡಿಯೋ ಇದೆ. ಸರ್ಕಾರ ರಚನೆ ಆಗಿರೋದು 105 ಜನ ಶಾಸಕರಿಂದ ಅಂತೀರಿ. ನಾಚಿಕೆ ಆಗಲ್ವಾ ನಿಮಗೆ. ಎಲ್ಲರ ಮೇಲೆ ಮುಗಿಬೀಳ್ತೀಯಾ. ಸಂಗೊಳ್ಳಿ ರಾಯಣ್ಣನನ್ನ ಕೇವಲ ಬೆಳಗಾವಿಗೆ ಸೀಮಿತ ಮಾಡುತ್ತೀರಿ ಎಂದು ವಿರುದ್ಧ ಕಿಡಿಕಾರಿದರು.

ಪ್ರತಾಪ್ ಸಿಂಹ ನೀನು ಎಷ್ಟು ಹೆಣ್ಣುಮಕ್ಕಳನ್ನ ಹಾಳು ಮಾಡಿದ್ದಿಯಾ ಅಂತ ಗೊತ್ತಿದೆ. ಅದಕ್ಕೆ ಸಾಕ್ಷಿ ಇದೆ.  ಕೋರ್ಟ್ ಅನುಮತಿ ಪಡೆದು ಪ್ರೊಜಕ್ಟರ್ ಅಲ್ಲೆ ಬಿಡುಗಡೆ ಮಾಡುತ್ತೀನಿ. ಅವರು 10% ಗೆ ಎಂಪಿ ಅನುದಾನ ಮಾರಿಕೊಂಡಿದ್ದಾರೆ. ಇದಕ್ಕೂ ದಾಖಲೆಗಳು ಇದೆ. ಪತ್ರಕರ್ತರಾಗಿದ್ದಾಗ ಏನೇನು ಮಾಡಿದ್ದಿಯಾ ಅನ್ನೋದು ಗೊತ್ತು. ಎಲ್ಲದಕ್ಕೂ ದಾಖಲೆ ಇದೆ ಎಂದು ಹರಿಹಾಯ್ದರು.

ಪ್ರತಾಪ್ ಸಿಂಹಗೆ ತಾಕತ್ತಿದ್ದರೆ ನನ್ನ ಮೇಲೆ ಕೇಸ್ ಹಾಕಲಿ. ಮಾನನಷ್ಟ ಮೊಕದ್ದಮೆ ಹಾಕಲಿ. ನಾನು ದಾಖಲೆಗಳನ್ನ ಕೋರ್ಟ್ ಗೆ ನೀಡುತ್ತೇನೆ ಎಂದು ವಾಗ್ದಾಳಿ ನಡೆಸಿದರು.

ಪತ್ರಿಕಾಗೋಷ್ಠಿಯಲ್ಲಿ ನಗರ ಕಾಂಗ್ರೆಸ್ ಅಧ್ಯಕ್ಷ ಆರ್.ಮೂರ್ತಿ, ಕಾಂಗ್ರೆಸ್ ಮುಖಂಡ ಶಿವಣ್ಣ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಬಿ.ವೈ.ವಿಜಯೇಂದ್ರ 482 ಕೆಪಿಎಸ್‍ಸಿ ಹುದ್ದೆ ಮಾರಾಟ ಮಾಡಿದ್ದಾರೆ

ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು 482 ಕೆಪಿಎಸ್‍ಸಿ ಹುದ್ದೆ ಮಾರಾಟ ಮಾಡಿದ್ದಾರೆ. ಡಿಸೆಂಬರ್ ನಲ್ಲಿ ಆಗಿದ್ದ ನೇಮಕಾತಿ ಪ್ರಕ್ರಿಯೆಯಲ್ಲಿ 218 ಕೋಟಿ ಅವ್ಯವಹಾರ ಆಗಿದೆ. ಹಣವನ್ನು ಕೊಟ್ಟು ತೆಗೆದುಕೊಂಡಿರುವ ದಾಖಲೆಗಳು ನಮ್ಮ ಬಳಿ ಇವೆ. ನಾನು ಮಾಧ್ಯಮಗೋಷ್ಠಿ ಮಾಡಿದ ನಂತರ ಆ ದಾಖಲೆ ನನಗೆ ಸಿಕ್ಕಿದ್ದು, ಇದನ್ನು ಸೇರಿ ಎಲ್ಲಾ ದಾಖಲೆಗಳನ್ನು ಬಿಡುಗಡೆ ಮಾಡಲು ನಾನು ಬದ್ಧನಾಗಿದ್ದೇನೆ ಎಂದು ಎಂ.ಲಕ್ಷ್ಮಣ್ ಸುದ್ದಿಗೋಷ್ಟಿಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News