ನಳಿನ್ ಕುಮಾರ್ ಕಟೀಲು ಆರೋಗ್ಯ ವೃದ್ಧಿಸಲು ಶ್ರೀ ಸೋಮನಾಥ ದೇವಳದಲ್ಲಿ ಸಾಮೂಹಿಕ ಪ್ರಾರ್ಥನೆ

Update: 2020-08-31 09:46 GMT

ಉಳ್ಳಾಲ, ಆ.31: ಕೊರೋನ ಸೋಂಕಿಗೆ ಪಾಸಿಟಿವ್ ಆಗಿರುವ ಬಿಜೆಪಿ ರಾಜ್ಯಧ್ಯಕ್ಷ ನಳಿನ್ ಕುಮಾರ್ ಕಟೀಲು ಶೀಘ್ರ ಗುಣಮುಖರಾಗಿ ಪಕ್ಷದ, ಸಾಮಾಜಿಕ ಸೇವೆಯಲ್ಲಿ ತೊಡಗುವಂತಾಗಲು ಮಾತೃಭೂಮಿ ಸೇವಾ ಪ್ರತಿಷ್ಠಾನದ ಅಧ್ಯಕ್ಷ ಕೆ.ಟಿ.ಸುವರ್ಣ ನೇತೃತ್ವದಲ್ಲಿ ಸೋಮವಾರ ಸೋಮೇಶ್ವರದ  ಶ್ರೀ ಸೋಮನಾಥನಿಗೆ ಪೂಜೆ ಸಲ್ಲಿಸಿ ಪ್ರಾರ್ಥಿಸಲಾಯಿತು.

   ಸೋಮೇಶ್ವರ ಶ್ರೀ ಸೋಮನಾಥ ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಬಿ.‌ರವೀಂದ್ರನಾಥ ರೈ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಸಂತೋಷ್ ಕುಮಾರ್ ರೈ ಬೋಳಿಯಾರ್, ಕಾರ್ಯದರ್ಶಿ ಸತೀಶ್ ಕುಂಪಲ, ರಾಜ್ಯ ಕಾರ್ಯಕಾರಿಣಿ ಸದಸ್ಯ ಕೆ.ರವೀಂದ್ರ ಶೆಟ್ಟಿ ಉಳಿದೊಟ್ಟು, ಬಿಜೆಪಿ  ಮುಖಂಡರುಗಳಾದ ಚಂದ್ರಶೇಖರ ಉಚ್ವಿಲ್, ಜಿಪಂ ಸ್ಥಾಯಿ ಸಮಿತಿಯ ಅಧ್ಯಕ್ಷೆ ಧನಲಕ್ಚ್ಮೀ ಗಟ್ಟಿ, ಮಾತೃಭೂಮಿ ಸೇವಾ ಪ್ರತಿಷ್ಠಾನದ ಸಂಚಾಲಕ ಚಂದ್ರಹಾಸ ಅಡ್ಯಾಂತಾಯ, ಸೀತಾರಾಮ ಶೆಟ್ಟಿ ನೆತ್ತಿಲ ಬಾಳಿಕೆ, ನಾರಾಯಣ ಗುರು ಅಧ್ಯಯನ ಪೀಠ ವಿವಿ ಸದಸ್ಯ ಸತೀಶ್ ಕರ್ಕೇರ, ತಾಲೂಕು ಪಂಚಾಯತ್ ಸದಸ್ಯ ರವಿಶಂಕರ್, ನಗರಸಭಾ ಸದಸ್ಯರಾದ ರಾಜೇಶ್ ಯು.ಬಿ., ಭಗತ್ ಸಿಂಗ್ ಸೇವಾ ಪ್ರತಿಷ್ಠಾನದ ಅಧ್ಯಕ್ಷ ಜೀವನ್ ಕುಮಾರ್ ತೊಕ್ಕೊಟು, ಕಾಪಿಕಾಡು ಶ್ರೀ ಉಮಾಮಹೇಶ್ವರಿ ದೇವಸ್ಥಾನದ ಪ್ರಧಾನ ಕಾರ್ಯದರ್ಶಿ ಆನಂದ ಶೆಟ್ಟಿ, ಗಣೇಶ್ ಕಾಪಿಕಾಡ್, ಬಂಟರ ಸಂಘದ ಅಧ್ಯಕ್ಷ ಜಿತೇಂದ್ರ ಶೆಟ್ಟಿ, ಕುಲಾಲ ಸಂಘದ ಅಧ್ಯಕ್ಷ ಪ್ರವೀಣ್ ಬಸ್ತಿ, ಬಿಜೆಪಿ ಕ್ಷೇತ್ರದ ಪ್ರಧಾನ ಕಾರ್ಯದರ್ಶಿಗಳಾದ ಹೇಮಂತ್ ಶೆಟ್ಟಿ ಹಾಗೂ ನವೀನ್ ಪಾದಲ್ಪಾಡಿ, ಪ್ರಮುಖರಾದ ಕೃಷ್ಣ ಶೆಟ್ಟಿ ತಾಮಾರ್, ಹರೀಶ್ ಅಂಬ್ಲಮೊಗರು, ದಯಾನಂದ ತೊಕ್ಕೊಟು, ಪ್ರವೀಣ್ ಆಳ್ವ, ಗೋಪಾಲಕೃಷ್ಣ ಮೇಲಾಂಟ, ನಗರಸಭಾ ಸದಸ್ಯರಾದ ರಾಜೇಶ್ ಯು.ಬಿ. ಹಾಗೂ ರವೀಂದ್ರ ಶೆಟ್ಟಿ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News