ತುಮಕೂರು: ಒಂಟಿ ಮಹಿಳೆಯ ಕೊಲೆ ಪ್ರಕರಣ; ಐವರು ಆರೋಪಿಗಳ ಬಂಧನ

Update: 2020-08-31 10:00 GMT

ತುಮಕೂರು.ಆ.31: ಹತ್ತು ದಿನಗಳ ಹಿಂದೆ ನಗರದಲ್ಲಿ ನಡೆದ ಒಂಟಿ ಮಹಿಳೆಯ  ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಐವರು ಆರೋಪಿಗಳನ್ನು ತುಮಕೂರು ನಗರ ಪೊಲೀಸರು ಬಂಧಿಸಿದ್ದಾರೆ.

ಮಾರುತಿ(21), ಧನರಾಜ್ ನಾಯ್ಕ್(22), ರಾಜೇಶ್(22), ಮನು (22) ಹಾಗೂ ಧನುಷ್ (21) ಬಂಧಿತ ಆರೋಪಿಗಳಾಗಿದ್ದಾರೆ.

ನಗರದ ಒಂದನೇ ವಾರ್ಡಿಗೆ ಸೇರಿದ ಡಿ.ಎಂ. ಪಾಳ್ಯದ ಉದಯಕುಮಾರ್ ಅವರ ಮನೆಯ ಒಂದನೇ ಮಹಡಿಯಲ್ಲಿ ಬಾಡಿಗೆಗೆ ವಾಸವಾಗಿದ್ದ ಅಂಜಲಿ ಎಂಬವರನ್ನು ಆ.21ರಂದು ಕೊಲೆಗೈಯಲಾಗಿತ್ತು. ಈ ಸಂಬಂಧ ಮನೆಯ ಮಾಲಕರು ದೂರು ನೀಡಿದ್ದರು.

ದೂರಿನ ಹಿನ್ನೆಲೆಯಲ್ಲಿ ಆರೋಪಿಗಳ ಪತ್ತೆಗಾಗಿ ಎಎಸ್ಪಿ ಉದ್ದೇಶ್ ಮಾರ್ಗದರ್ಶನದಲ್ಲಿ ನಗರ ಠಾಣೆ ವೃತ್ತ ನಿರೀಕ್ಷಕರಾದ ನವೀನಕುಮಾರ್ ನೇತೃತ್ವದಲ್ಲಿ ಪಿಎಸ್‌ಐ ಮಂಜುನಾಥ್ ಮತ್ತು ಸಿಬ್ಬಂದಿಯನ್ನು ಒಳಗೊಂಡಂತೆ ತಂಡ ರಚಿಸಲಾಗಿತ್ತು. ಇದೀಗ ತಂಡವು ಅಂಜಲಿ ಹತ್ಯೆ ಪ್ರಕರಣವನ್ನು ಭೇದಿಸಿದೆ. ವಿಚಾರಣೆಯ ವೇಳೆ ಆರೋಪಿಗಳು ಹಣದ ಆಸೆಗೆ ಕೊಲೆ ಮಾಡಿರುವುದಾಗಿ ತಪ್ಪೊಪ್ಪಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೃತ್ಯಕ್ಕೆ ಬಳಸಿದ ಒಂದು ಕಾರು, ಎರಡು ಕಬ್ಬಿಣದ ರಾಡು, ಏಳು ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News