ಸುಪ್ರೀಂ ತೀರ್ಪನ್ನು ಗೌರವಯುತವಾಗಿ ಒಪ್ಪುತ್ತೇನೆ, 1 ರೂ. ಪಾವತಿಸಲಾಗಿದೆ: ಪ್ರಶಾಂತ್ ಭೂಷಣ್ ಟ್ವೀಟ್

Update: 2020-08-31 10:40 GMT

ಹೊಸದಿಲ್ಲಿ: ಸುಪ್ರೀಂ ಕೋರ್ಟ್ ಹಾಗೂ ಮುಖ್ಯ ನ್ಯಾಯಮೂರ್ತಿಗಳನ್ನು ಟೀಕಿಸಿ ತಾವು ಮಾಡಿದ್ದ ಎರಡು ಟ್ವೀಟ್ ಗಳಿಗೆ ಸಂಬಂಧಿಸಿ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ದೋಷಿಯೆಂದು ಘೋಷಿತರಾಗಿದ್ದ ಹಿರಿಯ ವಕೀಲ ಪ್ರಶಾಂತ್ ಭೂಷಣ್ ಇಂದು 1 ರೂ. ದಂಡ ವಿಧಿಸಿ ಸುಪ್ರೀಂ ಕೋರ್ಟ್ ನೀಡಿದ ತೀರ್ಪನ್ನು `ಗೌರವಯುತವಾಗಿ' ಒಪ್ಪಿಕೊಳ್ಳುವುದಾಗಿ ಹೇಳಿದ್ದಾರೆ. ತನಗೆ ವಿಧಿಸಲಾದ ದಂಡವನ್ನು ಪಾವತಿಸಲಾಗಿದೆ ಎಂದರು.

“ನನ್ನ ವಕೀಲ ಹಾಗೂ ಹಿರಿಯ ಸಹೋದ್ಯೋಗಿ ರಾಜೀವ್ ಧವನ್ ಇಂದಿನ ಸುಪ್ರೀಂ ಕೋರ್ಟ್ ತೀರ್ಪು ಬಂದ ಕೂಡಲೇ ರೂ 1 ಪಾವತಿಸಿದ್ದಾರೆ'' ಎಂದು ಭೂಷಣ್ ಟ್ವೀಟ್ ಮಾಡಿದ್ದಾರೆ. ಜತೆಗೆ ತಾವು ಕೈಯ್ಯಲ್ಲಿ ಒಂದು ರೂಪಾಯಿ ನಾಣ್ಯ ಹಿಡಿದುಕೊಂಡಿರುವ ಚಿತ್ರವನ್ನೂ ಪೋಸ್ಟ್ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News