ಕೊರೋನದಿಂದ ಗುಣಮುಖ: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಆಸ್ಪತ್ರೆಯಿಂದ ಬಿಡುಗಡೆ

Update: 2020-08-31 12:54 GMT

ಬೆಂಗಳೂರು, ಆ.31: ಕೊರೋನ ಸೋಂಕು ದೃಢಪಟ್ಟ ಹಿನ್ನೆಲೆ ನಗರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಗುಣಮುಖರಾಗಿ ಸೋಮವಾರ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಆಗಸ್ಟ್ 25ರಂದು ಡಿ.ಕೆ. ಶಿವಕುಮಾರ್ ಅವರಿಗೆ ಕೊರೋನ ಸೋಂಕು ದೃಢಪಟ್ಟಿತ್ತು. ನಂತರ ಅವರು ರಾಜಾಜಿನಗರದ ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ ಆಸ್ಪತ್ರೆಯಿಂದಲೇ ಪಕ್ಷದ ಮುಖಂಡರ ಜೊತೆ ಆನ್‍ಲೈನ್ ಸಭೆ ಸೇರಿದಂತೆ ಪಕ್ಷದ ಇತರೆ ಕೆಲಸಗಳನ್ನು ಶಿವಕುಮಾರ್ ನಡೆಸುತ್ತಿದ್ದರು.

ಏಳನೇ ದಿನವೇ ಆಸ್ಪತ್ರೆಯಿಂದ ಬಿಡುಗಡೆಯಾಗಿರುವ ಡಿ.ಕೆ ಶಿವಕುಮಾರ್ ಅವರು ಸದ್ಯ ಮನೆಯಲ್ಲೇ ವಿಶ್ರಾಂತಿ ಪಡೆಯಲಿದ್ದಾರೆ. ಅಲ್ಲದೇ ಅವರ ಆರೋಗ್ಯದ ಆರೈಕೆಯನ್ನು ಡಾ. ರಂಗನಾಥ್ ನೋಡಿಕೊಳ್ಳಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News