ಎಸ್ ಡಿಪಿಐ ಕೆ.ಸಿ. ರೋಡ್ ವಲಯದ ವತಿಯಿಂದ ‘ಆಯುಷ್ಮಾನ್ ಆರೋಗ್ಯ ಕಾರ್ಡ್’ ನೋಂದಣಿ ಅಭಿಯಾನ

Update: 2020-08-31 17:57 GMT

ಕಲ್ಲಡ್ಕ: ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕೆ.ಸಿ. ರೋಡ್ ವಲಯ ವತಿಯಿಂದ ‘ಆಯುಷ್ಮಾನ್ ಆರೋಗ್ಯ ಕಾರ್ಡ್’ ನೋಂದಣಿ ಅಭಿಯಾನ ಕಾರ್ಯಕ್ರಮ ಕಲ್ಲಡ್ಕದ ಕೆ.ಸಿ ರೋಡಿನಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಕಲ್ಲಡ್ಕ ಡಿವಿಜನ್ ಅಧ್ಯಕ್ಷ ಸಿದ್ದೀಕ್ ಪನಾಮ ಉದ್ಘಾಟಿಸಿದರು

ಎಸ್ ಡಿಪಿಐ ಕೆ.ಸಿ ರೋಡ್ ವಲಯ ಅಧ್ಯಕ್ಷ ಇಕ್ಬಾಲ್ ಕೆ.ಸಿ ರೋಡ್ ಅಧ್ಯಕ್ಷತೆ ವಹಿಸಿದ್ದರು. ಎಸ್ ಡಿಪಿಐ ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಿತಿಯ ಅಧ್ಯಕ್ಷ ಯೂಸುಫ್ ಆಲಡ್ಕ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಕೆ.ಸಿ. ರೋಡ್ ವಲಯದ ಎಲ್ಲಾ ಪದಾಧಿಕಾರಿಗಳು ಮತ್ತು ಸದಸ್ಯರು ಭಾಗವಹಿಸಿದ್ದರು. ಮುನ್ನೂರಕ್ಕಿಂತಲೂ ಅಧಿಕ ಜನರು ಕಾರ್ಯಕ್ರಮದ ಪ್ರಯೋಜನ ಪಡೆದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News