ಸೆ.4ರಂದು ಕೆಸಿಎಫ್ ಅಂತರಾಷ್ಟ್ರೀಯ ಸಮಿತಿ ವತಿಯಿಂದ 'ಕೋವಿಡ್19: ವಿಚಾರ ಗೋಷ್ಠಿ'

Update: 2020-09-01 12:39 GMT

ಮಂಗಳೂರು: ಕರ್ನಾಟಕ ಕಲ್ಚರಲ್ ಫೌಂಡೇಶನ್ ಇದರ ಅಂತರ್ ರಾಷ್ಟ್ರೀಯ ಸಮಿತಿ ವತಿಯಿಂದ "ಕೋವಿಡ್ ಸಮಯದಲ್ಲಿ ಹಾಗೂ ನಂತರದ ಜೀವನ" ಎಂಬ ವಿಷಯದ ಕುರಿತು ಸೆಪ್ಟಂಬರ್4 ರಂದು Zoom App ನಲ್ಲಿ ಆನ್ಲೈನ್‌ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಕೇರಳದ ಮರ್ಕಝ್ ನಾಲೇಡ್ಜ್ ಸಿಟಿಯ ನಿರ್ದೇಶಕ ಡಾ.ಅಬ್ದುಲ್ ಹಕೀಮ್ ಅಲ್-ಅಝ್'ಹರಿ ಉಪನ್ಯಾಸ ನೀಡಲಿದ್ದಾರೆ.

ಕೆಸಿಎಫ್ ಅಂತರ್ ರಾಷ್ಟ್ರೀಯ ಸಮಿತಿ ಸಾಂತ್ವನ ಇಲಾಖೆಯ ಅಧ್ಯಕ್ಷ ಅಲೀ ಮುಸ್ಲಿಯಾರ್ ರವರ ದುಆದೊಂದಿಗೆ ಕಾರ್ಯಕ್ರಮ ಆರಂಭವಾಗಲಿದೆ. ಅಂತರ್ ರಾಷ್ಟ್ರೀಯ ಸಮಿತಿ ಅಡ್ಮಿನ್ ಇಲಾಖೆಯ ಅಧ್ಯಕ್ಷ ಡಾ.ಅಬ್ದುರ್ರಶೀದ್ ಝೈನಿ ಕಾಮಿಲ್ ಸಖಾಫಿ ಅಧ್ಯಕ್ಷತೆ ವಹಿಸಲಿದ್ದಾರೆ. ಪ್ರಧಾನ ಕಾರ್ಯದರ್ಶಿ ಜನಾಬ್ ಖಮರುದ್ದೀನ್ ಗೂಡಿನಬಳಿ ಉದ್ಘಾಟಿಸಲಿದ್ದಾರೆ. ಅಧ್ಯಕ್ಷ ಡಾ.ಶೇಖ್ ಬಾವ ಮಂಗಳೂರು ಹಾಗೂ ಫೈನಾನ್ಷಿಯಲ್‌ ಕಂಟ್ರೋಲರ್ ಹಮೀದ್ ಸಅದಿ ಈಶ್ವರಮಂಗಳ ರವರು ಪ್ರಾಸ್ತಾವಿಕ ಭಾಷಣ ಮಾಡಲಿದ್ದಾರೆ.

ಕೋವಿಡ್ ಕಾಲದಲ್ಲಿ ಹಲವರ ಕೆಲಸಗಳು ನಷ್ಟವಾಗಿದ್ದು, ಇನ್ನು‌ ಕೆಲವರು ಆರ್ಥಿಕವಾಗಿ ಬಹುದೊಡ್ಡ ನಷ್ಟದಲ್ಲಿದ್ದಾರೆ. ಇದಕ್ಕೂ ಮಿಗಿಲಾಗಿ ಈ ಕೋವಿಡ್ ಕಾಲದಿಂದ ಹೊರಬಂದ ಮೇಲೆ ಪರಿಸ್ಥಿತಿ ಹೇಗಿರುತ್ತದೆ ಎಂಬುದು ಊಹಿಸಲೂ ಸಾಧ್ಯವಿಲ್ಲದ ವಿಷಯವಾಗಿದೆ. ಹೀಗಿರುವಾಗ ನಾವು ಏನು ಮಾಡಬೇಕು ಹಾಗೂ ಏನು ಮಾಡಬಾರದು ಎಂದು ತಿಳಿದು ಈ ಸಂದಿಗ್ಧ ಪರಿಸ್ಥಿತಿಯನ್ನು ನಿಭಾಯಿಸಲು ಉಸ್ತಾದರು ನೀಡುವ ಸಲಹೆಗಳು ಉಪಕಾರಿಯಾಗುವುದರಲ್ಲಿ ಯಾವುದೇ ಸಂಶಯವಿಲ್ಲ ಆದ್ದರಿಂದ ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳಲು ಅಡ್ಮಿನ್ ಇಲಾಖೆಯ ಕಾರ್ಯದರ್ಶಿ ಇಕ್ಬಾಲ್ ಬೊಲ್ಮಾರ್ ಬರ್ಕ ಹಾಗೂ ಇಹ್ಸಾನ್ ಇಲಾಖೆಯ ಕಾರ್ಯದರ್ಶಿ ರಹೀಮ್ ಸಅದಿ ಖತ್ತರ್ ರವರು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News