ದೇಶದ ಆರ್ಥಿಕತೆಯನ್ನು ಪ್ರಪಾತಕ್ಕೆ ತಳ್ಳಿದ ಮೋದಿ ಸರಕಾರ: ಈಶ್ವರ್ ಖಂಡ್ರೆ

Update: 2020-09-01 13:18 GMT

ಬೆಂಗಳೂರು, ಸೆ.1: ತಮ್ಮ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ‘ಆ್ಯಕ್ಟ್ ಆಫ್ ಗಾಡ್’ ಎನ್ನುವ ಕೇಂದ್ರದ ನರೇಂದ್ರ ಮೋದಿ ಸರಕಾರ, ಈಗ ದೇಶದ ಆರ್ಥಿಕತೆಯನ್ನು ಇನ್ನಷ್ಟು ಪ್ರಪಾತಕ್ಕೆ ತಳ್ಳಿರುವುದು ಅಂಕಿ-ಅಂಶ ಸಮೇತವಾಗಿ ರುಜುವಾತಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಟೀಕಿಸಿದ್ದಾರೆ.

ದೇಶದ ಜಿಡಿಪಿ ಶೇ.29.9ರಷ್ಟು ಋಣಾತ್ಮಕ ಕುಸಿತ ಕಂಡಿದ್ದು, ಇದು ಸಾರ್ವಕಾಲಿಕ ಕುಸಿತ ಎಂದೇ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಹೀಗಿದ್ದೂ ದೇಶದಲ್ಲಿ ಎಲ್ಲವೂ ಸರಿ ಇದೆ ಎಂಬಂತೆ ಬಿಂಬಿಸುತ್ತಾ ಕೇವಲ ಚಪ್ಪಾಳೆ ಹೊಡೆದು ದೀಪ ಹಚ್ಚಿ ಭಾವನಾತ್ಮಕ ವಿಷಯಗಳನ್ನೆ ಮುಂದಿಟ್ಟು ಇನ್ನೆಷ್ಟು ದಿನ ಜನರನ್ನ ಕತ್ತಲಲ್ಲಿಡುತ್ತೀರಿ ಪ್ರಧಾನಿಗಳೇ? ಉತ್ತರಿಸಿ ಎಂದು ಅವರು ಟ್ವೀಟ್ ಮಾಡಿ ಪ್ರಶ್ನಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News