ವೃತ್ತಿಪರ, ಪದವಿ, ಸ್ನಾತಕೋತ್ತರ ವಿದ್ಯಾರ್ಥಿಗಳ ಬಸ್ ಪಾಸ್ ಮಾನ್ಯಕ್ಕೆ ಡಿಸಿಎಂ ಸವದಿ ಸೂಚನೆ

Update: 2020-09-01 17:48 GMT

ಬೆಂಗಳೂರು, ಸೆ. 1: ವೃತ್ತಿಪರ, ಪದವಿ, ಸ್ನಾತಕೋತ್ತರ ಪರೀಕ್ಷೆಗಳ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಕೆಎಸ್ಸಾರ್ಟಿಸಿ) ಬಸ್‍ಗಳಲ್ಲಿ ವಿದ್ಯಾರ್ಥಿಗಳ ಬಸ್ ಪಾಸ್ ಮಾನ್ಯ ಮಾಡಲು ಸಾರಿಗೆ ಸಚಿವರು ಆಗಿರುವ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಸೂಚನೆ ನೀಡಿದ್ದಾರೆ.

ಸೆಪ್ಟಂಬರ್ ತಿಂಗಳಲ್ಲಿ ವೃತ್ತಿಪರ, ಪದವಿ, ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಪರೀಕ್ಷೆ ಇದ್ದು, ಈ ಅವಧಿಯಲ್ಲಿ ಕಳೆದ ವರ್ಷ ವಿತರಿಸಿರುವ ಬಸ್‍ಪಾಸ್ ಅನ್ನು ಪಾಸಿನಲ್ಲಿ ನಮೂದಿಸಿರುವ ಮಾರ್ಗದಲ್ಲಿ ಉಚಿತ ಪ್ರಯಾಣಿಸಲು ಅವಕಾಶ ನೀಡಬೇಕು ಎಂದು ಸೂಚಿಸಲಾಗಿದೆ.

ಈ ಸಂಬಂಧ ಲೋಕಸಭಾ ಸದಸ್ಯ ಜಿ.ಸಿ.ಚಂದ್ರಶೇಖರ್ ಪತ್ರ ಬರೆದಿದ್ದು, ಕೊರೋನ ಲಾಕ್‍ಡೌನ್ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಪಾಸ್ ನವೀಕರಿಸಲು ಸಾಧ್ಯವಾಗಿಲ್ಲ. ಹೀಗಾಗಿ ಅದೇ ಪಾಸ್ ಅನ್ನು ಮಾನ್ಯ ಮಾಡುವಂತೆ ಮನವಿ ಮಾಡಿದ್ದರು ಎಂದು ಕೆಎಸ್ಸಾರ್ಟಿಸಿ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News