ಮೂಡುಬಿದಿರೆ: ಮಾರಕಾಸ್ತ್ರಗಳಿಂದ ಕಡಿದು ಯುವಕನ ಕೊಲೆ

Update: 2020-09-02 14:38 GMT

ಮೂಡುಬಿದಿರೆ. ಸೆ.2: ಮೂಡುಬಿದಿರೆ ಪೊಲೀಸ್ ಠಾಣಾ ವ್ಯಾಪ್ತಿಯ ಬಡಗಮಿಜಾರು ಗ್ರಾಮದ ಅರೆಮಜಲು ಪಲ್ಕೆ ಎಂಬಲ್ಲಿ ಅವಿವಾಹಿತ ಯುವಕನನ್ನು ಮಾರಕಾಯುಧದಿಂದ ಕಡಿದು ಕೊಲೆಗೈದ ಘಟನೆ ಬುಧವಾರ ನಡೆದಿದೆ.

ಕೊಲೆಯಾದ ವ್ಯಕ್ತಿಯನ್ನು ಉಮೇಶ್ ಗೌಡ(35)ಎಂದು ಗುರುತಿಸಲಾಗಿದೆ. ಈತ ವೃತ್ತಿಯಲ್ಲಿ ಕೂಲಿ ಕಾರ್ಮಿಕ. ತನ್ನ ತಂದೆ ತಾಯಿ ಜತೆ ವಾಸವಾಗಿದ್ದ ಎನ್ನಲಾಗಿದೆ.

ಕೊಲೆಯಾದ ಸ್ಥಿತಿಯಲ್ಲಿ ಈತನ ಮೃತದೇಹವು ಹಳೆಮನೆಯ ಹತ್ತಿರ ಪತ್ತೆಯಾಗಿದೆ. ಈತನ ಕತ್ತು ಮತ್ತು ದೇಹದ ಇತರ ಭಾಗಗಳಲ್ಲಿ ಮಾರಕಾಯುಧದಿಂದ ಕಡಿದ ಗಾಯಗಳು ಕಂಡು ಬಂದಿದೆ ಎಂದು ತನಿಖೆ ನಡೆಸುತ್ತಿರುವ ಪೊಲೀಸರು ತಿಳಿಸಿದ್ದಾರೆ.

ಡಿಸಿಪಿ ವಿನಯ ಗಾಂವ್ಕರ್, ಮಂಗಳೂರು ಉತ್ತರ ಉಪವಿಭಾಗದ ಎಸಿಪಿ ಬೆಳ್ಳಿಯಪ್ಪ, ಮೂಡುಬಿದಿರೆ ಇನ್‌ಸ್ಪೆಕ್ಟರ್ ದಿನೇಶ್ ಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಗೆ ಕಾರಣ ತಿಳಿದುಬಂದಿಲ್ಲ. ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News