ಬಸ್ ಪಾಸ್ ದರ ಏರಿಕೆ ಇಲ್ಲ: ಡಿಸಿಎಂ ಸವದಿ ಸ್ಪಷ್ಟನೆ

Update: 2020-09-02 17:33 GMT

ಬೆಂಗಳೂರು, ಸೆ.2: ವಿದ್ಯಾರ್ಥಿಗಳಿಗೆ ರಿಯಾಯಿತಿ ದರದಲ್ಲಿ ನೀಡಲಾಗುತ್ತಿರುವ ಬಸ್ ಪಾಸ್‍ಗಳ ದರವನ್ನು ಹೆಚ್ಚಿಸುವುದಿಲ್ಲ ಮತ್ತು ಈ ಹಿಂದೆ ಇದ್ದ ಮಾನದಂಡಗಳನ್ನು ಬದಲಿಸುವ ಯಾವುದೇ ಉದ್ದೇಶವಿಲ್ಲ, ಆದುದರಿಂದ, ಈ ಬಗ್ಗೆ ವಿದ್ಯಾರ್ಥಿಗಳು ಮತ್ತು ಪೋಷಕರು ಅನಗತ್ಯ ಆತಂಕಕ್ಕೆ ಒಳಗಾಗಬಾರದು ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಮನವಿ ಮಾಡಿದ್ದಾರೆ.

ವಿದ್ಯಾರ್ಥಿಗಳ ಬಸ್ ಪಾಸ್‍ಗಳ ದರ ಹೆಚ್ಚಿಸಲಾಗುತ್ತದೆ ಎಂಬುದು ಕೇವಲ ವದಂತಿಯಷ್ಟೇ. ಆ ಬಗ್ಗೆ ಯಾವುದೆ ನಿರ್ಧಾರ ಕೈಗೊಂಡಿಲ್ಲ. ಕಳೆದ ಶೈಕ್ಷಣಿಕ ವರ್ಷದಲ್ಲಿ ಬಸ್ ಪಾಸ್‍ಗಳನ್ನು ಯಾವ ಪ್ರಮಾಣದ ದರದಲ್ಲಿ ವಿತರಿಸಲಾಗಿತ್ತೋ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿಯೂ ಅದೇ ರೀತಿಯಲ್ಲಿ ಅಳವಡಿಸಿಕೊಳ್ಳಲಾಗುವುದು. ಅಷ್ಟೇ ಅಲ್ಲ ಹಿಂದಿನ ಮಾನದಂಡಗಳನ್ನೇ ಮುಂದುವರಿಸಲಾಗುವುದು ಎಂದು ಅವರು ಪ್ರಕಟಣೆಯಲ್ಲಿ ಸ್ಪಷ್ಟಪಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News